ಬೆಳಗಾವಿ: ಗೋಕಾಕ ತಾಲ್ಲೂಕಿನ ಕೊಣ್ಣೂರದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಮಂಗನ ಕಳೇಬರವನ್ನು ತಬ್ಬಿಕೊಂಡು ಮರಿಯು ರೋದಿಸುತ್ತಿದ್ದ ವಿಡಿಯೊ ವಾಟ್ಸ್ಆ್ಯಪ್ ಗ್ರೂಪ್ಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ವೈರಲ್ ಆಗಿದೆ.
ಎರಡು ದಿನಗಳ ಹಿಂದೆ ಘಟನೆ ನಡೆದಿದೆ. ಮೃತಪಟ್ಟ ಕೋತಿಯ ಅಂತ್ಯಸಂಸ್ಕಾರಕ್ಕೆ ಸ್ಥಳೀಯರು ಸಿದ್ಧತೆ ನಡೆಸುವ ವೇಳೆ, ಮರಿಯು ಅದನ್ನು ತಬ್ಬಿಕೊಂಡು ಕಣ್ಣೀರಿಟ್ಟಿದೆ. ಬಿಗಿಯಾಗಿ ಹಿಡಿದುಕೊಂಡು ಅದು ಚಡಪಡಿಸುತ್ತಿದ್ದ ದೃಶ್ಯ ನೆರೆದಿದ್ದವರ ಮನಕಲಿತು. ಅಲ್ಲಿನ ಪವನ್ ರಜಪೂತ ಎನ್ನುವವರು ಮರಿಯನ್ನು ಸಾಕುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.