ADVERTISEMENT

ನಾರಾಯಣ ಗುರು ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 14:32 IST
Last Updated 2 ಸೆಪ್ಟೆಂಬರ್ 2020, 14:32 IST
ಬೆಳಗಾವಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು
ಬೆಳಗಾವಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು   

ಬೆಳಗಾವಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಲ್ಲಿನ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ಬುಧವಾರ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು.

ಕೊರೊನಾ ಕಾರಣದಿಂದ ಸರಳವಾಗಿ ಕಾರ್ಯಕ್ರಮ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ನಾರಾಯಣ ಗುರು ಫೋಟೊಗೆ ಪುಷ್ಪಾರ್ಚನೆ ಮಾಡಿದರು. ಬಿಲ್ಲವರ ಸಂಘ ಜಿಲ್ಲಾ ಘಟಕದ ಕಾರ್ಯದರ್ಶಿ ಸುಜನ್ ಕುಮಾರ್, ಗಂಗಾಧರ ಎಂ., ಮಾಧವ ಕೋಟ್ಯಾನ್, ಗಣೇಶ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT