ADVERTISEMENT

ದೇಶವನ್ನು ಬಲಿಷ್ಠಗೊಳಿಸಿದ ಮೋದಿ; ಜೋಶಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 14:19 IST
Last Updated 11 ಏಪ್ರಿಲ್ 2021, 14:19 IST
ಬೆಳಗಾವಿ ತಾಲ್ಲೂಕಿನ ಹಿಂಡಲಗಾದಲ್ಲಿ ನಡೆದ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಪಕ್ಷದಿಂದ ಸನ್ಮಾನಿಸಲಾಯಿತು
ಬೆಳಗಾವಿ ತಾಲ್ಲೂಕಿನ ಹಿಂಡಲಗಾದಲ್ಲಿ ನಡೆದ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಪಕ್ಷದಿಂದ ಸನ್ಮಾನಿಸಲಾಯಿತು   

ಬೆಳಗಾವಿ: ‘ದೇಶವನ್ನು ಪ್ರಪಂಚದ ಇತರ ರಾಷ್ಟ್ರದ ದೊಡ್ಡ ವ್ಯಕ್ತಿಗಳು ನೋಡುವ ದೃಷ್ಟಿ ಬದಲಾಗಿದೆ. ಬಲಿಷ್ಠರೊಂದಿಗೆ ಪೈಪೋಟಿ ನೀಡಬಲ್ಲ ಸಶಕ್ತ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಮಾಣ ಮಾಡಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಗ್ರಾಮೀಣ ಮತ ಕ್ಷೇತ್ರದ ಇಂಡಲಗಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘60 ವರ್ಷ ಆಳಿದ ಕಾಂಗ್ರೆಸ್ ಭಾರತವನ್ನು ಹಾಳುಗೆಡವಿತ್ತು. ಇಂದು ಪ್ರಪಂಚದ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇಂತಹ ದೇಶ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಮೋದಿ ಅವರ ಕಾರ್ಯಕ್ಷಮತೆಯನ್ನು ವಿರೋಧಿಸುವ ಕಾಂಗ್ರೆಸ್ ಅನ್ನು ತಿರಸ್ಕರಿಸಬೇಕು’ ಎಂದು ಕರೆ ನೀಡಿದರು.

ADVERTISEMENT

ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಮಾತನಾಡಿದರು. ಮುಖಂಡರಾದ ಶಿವಾಜಿ ಸುಂಟಕರ, ನಾಗೇಶ ಮನೋಲಕರ, ಭಾಗ್ಯಶ್ರೀ ಕೋಕಿತಕರ, ರವಿ ಪಾಟೀಲ, ರಾಮಚಂದ್ರನ ಮನೋಲಕರ, ಪೃಥ್ವಿ ಸಿಂಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.