ADVERTISEMENT

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2020, 13:59 IST
Last Updated 12 ಜನವರಿ 2020, 13:59 IST
ಗೋಕಾಕದಲ್ಲಿ ಭಾನುವಾರ ದಿಗಂಬರ ಜೈನ ಸಮಾಜದಿಂದ ಆಯೋಜಿಸಿದ್ದ ಜ್ಞಾನ ಜ್ಯೋತಿ ಶಿಬಿರ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ದಿಗಂಬರ ಜೈನ ಸಮಾಜದ ಅಧ್ಯಕ್ಷ ವಿಜಯಕುಮಾರ ಖಾರೆಪಾಟಣ ಉದ್ಘಾಟಿಸಿದರು
ಗೋಕಾಕದಲ್ಲಿ ಭಾನುವಾರ ದಿಗಂಬರ ಜೈನ ಸಮಾಜದಿಂದ ಆಯೋಜಿಸಿದ್ದ ಜ್ಞಾನ ಜ್ಯೋತಿ ಶಿಬಿರ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ದಿಗಂಬರ ಜೈನ ಸಮಾಜದ ಅಧ್ಯಕ್ಷ ವಿಜಯಕುಮಾರ ಖಾರೆಪಾಟಣ ಉದ್ಘಾಟಿಸಿದರು   

ಗೋಕಾಕ: ‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ನೀಡಿ ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವ ಜವಾಬ್ದಾರಿ ಪಾಲಕರ ಮೇಲಿದೆ’ ಎಂದು ಇಲ್ಲಿನ ದಿಗಂಬರ ಜೈನ ಸಮಾಜದ ಅಧ್ಯಕ್ಷ ವಿಜಯಕುಮಾರ ಖಾರೆಪಾಟಣ ಹೇಳಿದರು.

ಭಾನುವಾರ ಇಲ್ಲಿನ ಪಾಯಸಾಗರ ಶಿಕ್ಷಣ ಸಂಸ್ಥೆಯ ಮಹಾವೀರ ಭವನದಲ್ಲಿ ದಿಗಂಬರ ಜೈನ ಸಮಾಜದಿಂದ ಆಯೋಜಿಸಿದ್ದ ಜ್ಞಾನ ಜ್ಯೋತಿ ಶಿಬಿರ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದು ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿ ಮಾಡುವ ಜೊತೆಗೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ಅವರಲ್ಲಿ ಹುದಿಗುರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಿಕ್ಷಣದೊಂದಿಗೆ ಅಧ್ಯಾತ್ಮವನ್ನೂ ಅವರಲ್ಲಿ ಕಲಿಸಿ ಅವರನ್ನು ಪರಿಪೂರ್ಣ ವ್ಯಕ್ತಿಗಳನ್ನಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಶಿಕ್ಷಕ ಬಿ.ಎಸ್. ಜೋಲಾಪೂರೆ ಮಾತನಾಡಿದರು. ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಸ್ವಾಮಿ ವಿವೇಕಾನಂದರ ಕುರಿತು ನಡೆಸಿದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಮಾಜದ ಪ್ರಮುಖರಾದ ಜಂಬೂರಾವ ಭರಮಗೌಡ, ಚಂದ್ರಕಲಾ ಸೊಲ್ಲಾಪೂರೆ, ಶಿಕ್ಷಕರಾದ ಟಿ.ಬಿ. ಬಿಲ್, ತ್ರೀಶೀಲಾ ಅಂಗಡಿ, ಜಯಶ್ರೀ ಗುರ್ಲಹೊಸುರ, ಶೈಲಾ ಕೊಟಬಾಗಿ, ಭರಮಣ್ಣ ಖಾರೆಪಾಟಣ, ಧನ್ಯಕುಮಾರ ಕಿತ್ತೂರ, ಅಣ್ಣಾಸಾಹೇಬ ಥಬಾಜ, ಶಿಕ್ಷಕ ರಾಮಚಂದ್ರ ಕಾಕಡೆ ಇದ್ದರು.

ವಿದ್ಯಾರ್ಥಿಗಳಾದ ಸಹನಾ ಶೆಟ್ಟಿ ಸ್ವಾಗತಿಸಿದರು. ಇಶಾ ರಾಜಮಾನೆ ನಿರೂಪಿಸಿದರು. ವರ್ಷಾ ಚೌಗಲೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.