ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಒಂಭತ್ತು ದಿನ ವೈಭವದಿಂದ ನೆರವೇರಲಿರುವ ನವರಾತ್ರಿ ಉತ್ಸವಕ್ಕೆ ಕಾಂಗ್ರೆಸ್ ಮುಖಂಡ ಅಶ್ವತ್ಥ ವೈದ್ಯ ಸೋಮವಾರ ಚಾಲನೆ ನೀಡಿದರು.
ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಆಶಾತಾಯಿ ಕೋರೆ, ಡಾ.ಪ್ರೀತಿ ದೊಡ್ಡವಾಡ, ಸಿಪಿಐ ಧರ್ಮಾಕರ ಧರ್ಮಟ್ಟಿ, ಪಿಎಸ್ಐ ಕಲ್ಮೇಶ ಬನ್ನೂರ, ಸಿದ್ದನಗೌಡ ಗೂಡ್ರಾಶಿ, ನಾಗರತ್ನಾ ಚೋಳಿನ, ರೇಣುಕಾ ಶಿಂತ್ರಿ, ಅಲ್ಲಮಪ್ರಭು ಪ್ರಭುನವರ, ಆರ್.ಎಚ್.ಸವದತ್ತಿ ಇತರರಿದ್ದರು.
ನವರಾತ್ರಿ ಮೊದಲ ದಿನವೇ ದೇಶದ ವಿವಿಧ ಭಾಗಗಳಿಂದ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ, ದೇವಿ ದರ್ಶನ ಪಡೆದರು. ಯಲ್ಲಮ್ಮ ದೇವಸ್ಥಾನದಲ್ಲಿ ಅಳವಡಿಸಿದ್ದ ದೀಪಕ್ಕೆ ಎಣ್ಣೆ ಹಾಕಿ ಭಕ್ತಿ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.