ADVERTISEMENT

ಎಸ್‌ಡಿಪಿಐ: ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 14:37 IST
Last Updated 18 ಅಕ್ಟೋಬರ್ 2021, 14:37 IST

ಬೆಳಗಾವಿ: ಎಸ್‍ಡಿಪಿಐ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು (2021-24ರ ಅವಧಿಗೆ) ಸೋಮವಾರ ಆಯ್ಕೆ ಮಾಡಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಬಿದ್ ಖಾನ್ ಮತ್ತು ಉಪಾಧ್ಯಕ್ಷರಾಗಿ ಕತಾಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಅಂಜುಮ್ ಮುಗುಟ್ ಖಾನ್, ಕಾರ್ಯದರ್ಶಿಯಾಗಿ ಮುಝಮ್ಮಿಲ್, ಖಜಾಂಚಿಯಾಗಿ ರೆಹಬರ್ ಮುಲ್ಲಾ ಹಾಗೂ ಸದಸ್ಯರಾಗಿ ಅಫ್ಜಲ್, ತಾಜುದ್ದೀನ್, ಝಕಿಉಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದರು.

ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಪ್ರಕ್ರಿಯೆಗೆ ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್ ಲತೀಫ್ ಚಾಲನೆ ನೀಡಿದರು.

ADVERTISEMENT

‘ಹಿಂದೂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ಖಾನಾಪುರದಲ್ಲಿ ಕೊಲೆಯಾದ ಯುವಕ ಅರ್ಬಾಜ್‌ ಮುಲ್ಲಾ ಕುಟುಂಬಕ್ಕೆ ಪರಿಹಾರ ನೀಡಬೇಕು. ಆ ಹತ್ಯೆಯ ಹಿಂದಿರುವ ಸಂಚುಕೋರರು ಮತ್ತು ಸೂತ್ರಧಾರರನ್ನು ಕೂಡ ಬಂಧಿಸಬೇಕು. ಅವರಿಗೆ ಕಠಿಣ ಶಿಕ್ಷೆ ಆಗುವಂತೆ ಪೊಲೀಸರು ನೋಡಿಕೊಳ್ಳಬೇಕು’ ಎಂದು ಅಪ್ಸರ್ ಕೊಡ್ಲಿಪೇಟೆ ಒತ್ತಾಯಿಸಿದರು.

‘ಕೊಲೆಗಡುಕರಿಗೆ ಶಿಕ್ಷೆ ಆಗುವವರೆಗೆ ಈ ಪ್ರಕರಣದಲ್ಲಿ ಕಾನೂನು ನೆರವನ್ನು ಎಸ್‌ಡಿಪಿಐಯಿಂದ ನೀಡಲಾಗುವುದು’ ಎಂದರು.

ರಾಜ್ಯ ಘಟಕದ ಮಾಧ್ಯಮ ಉಸ್ತುವಾರಿ ಅಕ್ರಮ್ ಹಸನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.