ADVERTISEMENT

ನಿಪ್ಪಾಣಿ: ಡೆಂಗಿಯಿಂದ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 8:54 IST
Last Updated 30 ಸೆಪ್ಟೆಂಬರ್ 2022, 8:54 IST
ಪ್ರೇಮ್ ಸಂಜಯ ಕಮತೆ
ಪ್ರೇಮ್ ಸಂಜಯ ಕಮತೆ   

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಡೆಂಗಿಯಿಂದ ಬಳಲುತ್ತಿದ್ದ ತಾಲ್ಲೂಕಿನ ಕಾರದಗಾ ಗ್ರಾಮದ ಯುವಕ ಶುಕ್ರವಾರ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರೇಮ್ ಸಂಜಯ ಕಮತೆ (19) ಸಾವನ್ನಪ್ಪಿದವರು.

ಬಿಎಸ್ಪಿ ಓದುತ್ತಿದ್ದ ಪ್ರೇಮ್ ಎಂಟು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಗಡಿಗೆ ಹೊಂದಿಕೊಂಡ ಮಹಾರಾಷ್ಟ್ರದ ಇಚಲಕರಂಜಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡೆಂಗಿ ತಗಲಿದ್ದು ಖಚಿತವಾಗಿತ್ತು.

ADVERTISEMENT

ಶುಕ್ರವಾರ ಆರೋಗ್ಯ ಹಠಾತ್ ಕ್ಷೀಣಿಸಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಕುಟುಂಬದ ಮೂಲಗಳು ತಿಳಿಸಿವೆ.

ಯುವಕನ ಸಾವಿನಿಂದ ಗ್ರಾಮದಲ್ಲಿ ಡೆಂಗಿ ಭೀತಿ ಆವರಿಸಿದೆ. ಜ್ವರ ಕಾಣಿಸಿಕೊಂಡ ಮತ್ತೆ ಕೆಲವರು ಆಸ್ಪತ್ರೆಗೆ ದೌಡಾಯಿಸಿ ತಪಾಸಣೆಗೆ ಒಳಗಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.