ADVERTISEMENT

ಜಿಲ್ಲೆ ವಿಭಜನೆಗೆ ಒಮ್ಮತವಿಲ್ಲ: ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 14:00 IST
Last Updated 20 ಸೆಪ್ಟೆಂಬರ್ 2019, 14:00 IST

ಬೆಳಗಾವಿ: ‘ಜಿಲ್ಲೆಯನ್ನು ವಿಭಜಿಸಬೇಕು ಎನ್ನುವ ಆಗ್ರಹ ಹಿಂದಿನಿಂದಲೂ ಇದೆ. ಆದರೆ, ಒಮ್ಮತವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ಸಂಬಂಧ ಎಲ್ಲ ಶಾಸಕರು, ಮುಖಂಡರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

‘ನೆರೆ ಪರಿಹಾರದ ವಿಷಯದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯ ಮೊದಲಾದವರು ಅಸ್ತಿತ್ವ ಉಳಿಸಿಕೊಳ್ಳಲು ಇದನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.