ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿಸಿದ್ದಾರೆ.
ಮೊದಲ ದಿನದಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ಆದರೆ, ಯಾರೂ ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಕೆಗೆ ಆ. 23 ಕೊನೆಯ ದಿನವಾಗಿದೆ. ಆ.24ರಂದು ಪರಿಶೀಲನೆ ನಡೆಯಲಿದೆ. ಆ.26ರಂದು ಹಿಂಪಡೆಯಲು ಕೊನೆಯ ದಿನವಾಗಿದೆ. ಸೆ. 3ರಂದು ಮತದಾನ ಹಾಗೂ ಅಗತ್ಯಬಿದ್ದರೆ ಮರು ಮತದಾನವನ್ನು ಸೆ.5ರಂದು ನಡೆಸಲಾಗುತ್ತದೆ. ಸೆ.6ರಂದು ಮತ ಎಣಿಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಿಶ್ವೇಶ್ವರಯ್ಯ ನಗರ ಉಪ ವಿಭಾಗ ಕಚೇರಿ, ಅಶೋಕ ನಗರ, ಮಹಾನಗರ ಪಾಲಿಕೆ ಮುಖ್ಯ ಕಚೇರಿ, ಕೋನವಾಳ ಗಲ್ಲಿ, ಗೋವಾವೇಸ್ ವೃತ್ತದ ಪಾಲಿಕೆ ಸಂಕೀರ್ಣದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯಾ ವಾರ್ಡ್ಗಳಿಗೆ ಸಂಬಂಧಿಸಿದಂತೆ ಈ ಸ್ಥಳದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ನಿಯೋಜಿತ ಅಧಿಕಾರಿಗಳು ನಾಮಪತ್ರ ಸ್ವೀಕರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.