ADVERTISEMENT

ಕಚೇರಿಗಳ ಸ್ಥಳಾಂತರಕ್ಕೆ ಚಿಂತನೆ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 13:49 IST
Last Updated 25 ಜನವರಿ 2020, 13:49 IST
ಬೆಳಗಾವಿಯ ಹುಕ್ಕೇರಿ ಹಿರೇಮಠದಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ  ಅವರು ಬಿ.ವೈ. ವಿಜಯೇಂದ್ರ ಅವರಿಗೆ ಶನಿವಾರ ಸನ್ಮಾನಿಸಿದರು.
ಬೆಳಗಾವಿಯ ಹುಕ್ಕೇರಿ ಹಿರೇಮಠದಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ  ಅವರು ಬಿ.ವೈ. ವಿಜಯೇಂದ್ರ ಅವರಿಗೆ ಶನಿವಾರ ಸನ್ಮಾನಿಸಿದರು.   

ಬೆಳಗಾವಿ:’ಇಲ್ಲಿನ ಸುವರ್ಣ ವಿಧಾನಸೌಧಕ್ಕೆ 4–5 ಕಚೇರಿಗಳನ್ನುಸ್ಥಳಾಂತರ ಮಾಡುವ ಬಗ್ಗೆ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ’ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.

ಇಲ್ಲಿ ಶನಿವಾರ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಗೌರವ ಸ್ವೀಕರಿಸಿ ಮಾತನಾಡಿದರು.

’ಬಿಎಸ್‌ವೈ ಸರ್ಕಾರ ಸುಭದ್ರವಾಗಿದೆ.3ವರ್ಷದಲ್ಲಿ ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ನೀಡಲಿದೆ’ ಎಂದರು.

ADVERTISEMENT

ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಅಲ್ಪಸಂಖ್ಯಾತ ನಿಗಮ ಮಂಡಳದ ಅಧ್ಯಕ್ಷ ಮುಕ್ತಾರ ಪಠಾಣ, ಶಾಸಕ ಅನಿಲ ಬೆನಕೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.