ADVERTISEMENT

ಅಧಿಕಾರಿಗಳ ಸಭೆ ನಡೆಸಿದ ಶಾಸಕರ ಪಿಎ!

ಬಾಲಚಂದ್ರ ಜಾರಕಿಹೊಳಿ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 14:46 IST
Last Updated 4 ಆಗಸ್ಟ್ 2019, 14:46 IST
ಚಿತ್ರ: 04ಜಿಕೆಕೆ7 ಗೋಕಾಕ ಎನ್‌.ಎಸ್‌.ಎಫ್‌. ಅತಿಥಿ ಗೃಹದಲ್ಲಿ ಭಾನುವಾರ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಪ್ರವಾಹ ನಿಯಂತ್ರಣ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಚಿತ್ರ: 04ಜಿಕೆಕೆ7 ಗೋಕಾಕ ಎನ್‌.ಎಸ್‌.ಎಫ್‌. ಅತಿಥಿ ಗೃಹದಲ್ಲಿ ಭಾನುವಾರ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಪ್ರವಾಹ ನಿಯಂತ್ರಣ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.   

ಗೋಕಾಕ: ಮಳೆಯಿಂದಾಗಿ ಘಟಪ್ರಭಾ, ಹಿರಣ್ಯಕೇಶಿ ಹಾಗೂ ಮಾರ್ಕಂಡೇಯ ನದಿಗಳ ನೀರಿನ ಮಟ್ಟ ಏರುತ್ತಿರುವುದರಿಂದ ಪ್ರವಾಹ ಭೀತಿ ಎದುರಾಗುವ ಸಂಭವವಿದೆ. ಹೀಗಾಗಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಡೆಸಿದ ಸಭೆಯಲ್ಲಿ ದೂರವಾಣಿ ಮೂಲಕ ನಿರ್ದೇಶನ ನೀಡಿದರು. ಜನರು ಹಾಗೂ ಜಾನುವಾರುಗಳ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ನದಿ ತೀರದ ಲೋಳಸೂರ, ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ತಳಕಟ್ನಾಳ, ತಿಗಡಿ, ಸುಣಧೋಳಿ, ಭೈರನಟ್ಟಿ, ಹುಣಶ್ಯಾಳ ಪಿವೈ, ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿಜಿ, ಫುಲಗಡ್ಡಿ, ಮಸಗುಪ್ಪಿ, ಪಟಗುಂದಿ, ಕಮಲದಿನ್ನಿ, ರಂಗಾಪೂರ, ಮುನ್ಯಾಳ ಗ್ರಾಮಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ನೋಡಲ್ ಅಧಿಕಾರಿಗಳು ಸ್ಥಳದಲ್ಲಿಯೇ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಅಗತ್ಯಕ್ಕೆ ಅನುಗುಣವಾಗಿ ಗಂಜಿ ಕೇಂದ್ರಗಳನ್ನು ತೆರೆಯಬೇಕು. ಜನರನ್ನು ಸ್ಥಳಾಂತರಿಸಲು ಬೋಟ್‌ಗಳ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.

ADVERTISEMENT

ಗೋಕಾಕ ತಹಶೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್‌ ಮುರಳೀಧರ ತಳ್ಳಿಕೇರಿ, ಜಿಲ್ಲಾ ಪಂಚಾಯ್ತಿ ಸದಸ್ಯ ಗೋವಿಂದ ಕೊಪ್ಪದ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಬಿಇಒ ಅಜಿತ ಮನ್ನಿಕೇರಿ, ಹೆಸ್ಕಾಂ ಎಇಇ ಆರ್‌.ಜಿ. ನಾಗನ್ನವರ, ಹನಮಂತ ತೇರದಾಳ, ಮುತ್ತೆಪ್ಪ ಕುಳ್ಳೂರ, ರವಿ ಪರುಶೆಟ್ಟಿ, ಉಪ ತಹಶೀಲ್ದಾರರಾದ ಲಕ್ಷ್ಮಣ ಭೋವಿ, ಎಂ.ಐ. ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.