ADVERTISEMENT

ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 16:17 IST
Last Updated 3 ಸೆಪ್ಟೆಂಬರ್ 2020, 16:17 IST
ಅಥಣಿ ಪೊಲೀಸರು ಆರೋಪಿಯನ್ನು ಬಂಧಿಸಿ ಅವರಿಂದ ₹ 15 ದ್ವಿಚಕ್ರವಾಹನಗಳನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ
ಅಥಣಿ ಪೊಲೀಸರು ಆರೋಪಿಯನ್ನು ಬಂಧಿಸಿ ಅವರಿಂದ ₹ 15 ದ್ವಿಚಕ್ರವಾಹನಗಳನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ   

ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್‌ಪಿ ಎಸ್.ವಿ. ಬಸರಗಿ ಹಾಗೂ ಸಿಪಿಐ ಶಂಕರಗೌಡ ಬಸನಗೌಡರ ಮತ್ತು ಸಿಬ್ಬಂದಿ ಒಳಗೊಂಡ ತಂಡ ರಚಿಸಲಾಗಿತ್ತು. ತಂಡಕ್ಕೆ ಎಸ್ಪಿ ನಗದು ಬಹುಮಾನ ಘೋಷಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.