ADVERTISEMENT

ಬಹಿರಂಗ ಪ್ರಚಾರ ಅಂತ್ಯ ಏ.15ರಂದು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 15:59 IST
Last Updated 14 ಏಪ್ರಿಲ್ 2021, 15:59 IST

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಏ. 17ರಂದು ನಡೆಯಲಿದ್ದು, ಗುರುವಾರ (ಏ.15) ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.

‘ಕ್ಷೇತ್ರದ ಮತದಾರರಲ್ಲದವರುಏ.15ರ ಸಂಜೆ 7ರ ಒಳಗೆ ಇಲ್ಲಿಂದ ನಿರ್ಗಮಿಸಬೇಕು. ಇಲ್ಲದಿದ್ದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮತದಾರರ ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು ನಡೆಸುವುದಕ್ಕಾಗಿ ಬಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂಡಲಗಿ, ಗೋಕಾಕದಲ್ಲಿ ಪ್ರಚಾರ ಕೈಗೊಂಡು ಇಲ್ಲೇ ತಂಗಿದ್ದಾರೆ. ಗುರುವಾರವೂ (ಏ.15) ಅವರು ವಿವಿಧೆಡೆ ಮತ ಬೇಟೆ ನಡೆಸಲಿದ್ದಾರೆ. ಸಂಜೆ ಹಿಂಡಲಗಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ನಾಯಕ ದೇವೇಂದ್ರ ಫಡಣವಿಸ್ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ADVERTISEMENT

ಏ.16ರಂದು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.