ADVERTISEMENT

ಮರಾಠಿ ಬ್ಯಾನರ್‌ಗೆ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 14:53 IST
Last Updated 1 ಜುಲೈ 2020, 14:53 IST
ಮರಾಠಿ ಬ್ಯಾನರ್‌
ಮರಾಠಿ ಬ್ಯಾನರ್‌   

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ‘ಪ್ರತಿಜ್ಞಾ ದಿನ’ಕ್ಕೆ ಶುಭ ಕೋರಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮರಾಠಿ ಭಾಷೆಯಲ್ಲಿ ಬ್ಯಾನರ್‌ ಅಳವಡಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷರಾಗಿ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಸಲೀಂ ಅಹಮ್ಮದ್‌ ಅವರು ಇದೇ 2ರಂದು ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ. ಅವರಿಗೆ ಶುಭ ಕೋರಿ ಬ್ಯಾನರ್‌ ಅಳವಡಿಸಿದ್ದಾರೆ. ಕನ್ನಡ, ಮರಾಠಿಯಲ್ಲಿ ಬ್ಯಾನರ್‌ ಅಳವಡಿಸಿದ್ದಾರೆ.

‘ರಾಜಕಾರಣಿಗಳಿಗೆ ಕನ್ನಡ, ಮರಾಠಿ ಸೇರಿದಂತೆ ವಿವಿಧ ಭಾಷಿಕರನ್ನು ಸೆಳೆದುಕೊಳ್ಳುವುದು ಅನಿವಾರ್ಯವಾಗಿರಬಹುದು. ಆದರೆ, ಕರ್ನಾಟಕದಲ್ಲಿ ಇದ್ದಾಗ ಮೊದಲ ಸ್ಥಾನವನ್ನು ಕನ್ನಡದಲ್ಲಿ ನೀಡಬೇಕು. ಬ್ಯಾನರ್‌ ಇರಲಿ, ಜಾಹೀರಾತು ಫಲಕವಿರಲಿ ಮೊದಲ ಸಾಲಿನಲ್ಲಿ ಕನ್ನಡ ಬರೆಯಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಘಟಕದ ಅಧ್ಯಕ್ಷ ಮಹಾದೇವ ತಳವಾರ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.