ADVERTISEMENT

‘ಗಿಡಗಳನ್ನು ಬೆಳೆಸಿದರೆ ತಾಪಮಾನ ತಗ್ಗಿಸಬಹುದು’

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 5:21 IST
Last Updated 20 ಸೆಪ್ಟೆಂಬರ್ 2019, 5:21 IST
ಅಥಣಿಯ ಕೆಎಲ್ಇ ಎಸ್ಎಸ್‌ಎಂಎಸ್ ಕಾಲೇಜಿನಲ್ಲಿ ಗುರುವಾರ ‘ಇಕೊ ಕ್ಲಬ್‌’ನಿಂದ ಹಮ್ಮಿಕೊಂಡಿದ್ದ ಓಝೋನ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು
ಅಥಣಿಯ ಕೆಎಲ್ಇ ಎಸ್ಎಸ್‌ಎಂಎಸ್ ಕಾಲೇಜಿನಲ್ಲಿ ಗುರುವಾರ ‘ಇಕೊ ಕ್ಲಬ್‌’ನಿಂದ ಹಮ್ಮಿಕೊಂಡಿದ್ದ ಓಝೋನ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು   

ಅಥಣಿ: ‘ಗಿಡ, ಮರಗಳನ್ನು ಬೆಳೆಸುವುದರಿಂದ ತಾಪಮಾನ ಪ್ರಮಾಣ ತಗ್ಗಿಸಬಹುದಾಗಿದೆ’ ಎಂದು ವಲಯ ಅರಣ್ಯಾಧಿಕಾರಿ ಪ್ರಶಾಂತ ಗೌರಾಣಿ ತಿಳಿಸಿದರು.

ಇಲ್ಲಿನ ಕೆಎಲ್ಇ ಸಂಸ್ಥೆಯ ಎಸ್ಎಸ್‌ಎಂಎಸ್ ಕಾಲೇಜಿನಲ್ಲಿ ಗುರುವಾರ ‘ಇಕೊ ಕ್ಲಬ್‌’ನಿಂದ ಹಮ್ಮಿಕೊಂಡಿದ್ದ ಓಝೋನ್ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಓಝೋನ್‌ ಪದರ ರಕ್ಷಿಸುವ ಜವಾಬ್ದಾರಿ ಎಲ್ಲರದಾಗಿದೆ. ಆದರೆ, ಅದನ್ನು ಅರಿತಿಲ್ಲದಿರುವುದು ವಿಷಾದನೀಯ’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಎಫ್. ಇಂಚಲ ಮಾತನಾಡಿ, ‘ವಿಷಾನಿಲದಿಂದಾಗಿ ಓಝೋನ್‌ ಪದರ ಕ್ಷೀಣಿಸುತ್ತಿದೆ’ ಎಂದು ತಿಳಿಸಿದರು.

ಕಾಲೇಜು ಒಕ್ಕೂಟದ ಉಪಾಧ್ಯಕ್ಷರಾದ ಡಾ.ಕೆ.ಆರ್. ಸಿದ್ದಗಂಗಮ್ಮ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಸ್.ಕೆ. ಸಜ್ಜನ ಇದ್ದರು.

ಎಂ.ಎನ್. ಕುಳ್ಳೋಳ್ಳಿ ಪರಿಚಯಿಸಿದರು. ಶಾರದಾ ಮಠದ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಫೂರ್ತಿ ಅಥಣಿ ನಿರೂಪಿಸಿದರು. ಪ್ರೀತಿ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.