ರಾಮದುರ್ಗ (ಬೆಳಗಾವಿ): ಪಟ್ಟಣದ ನವೀಪೇಟೆಯಲ್ಲಿ ಒಂದೇ ಕುಟುಂಬ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಗೊಬ್ಬರದ ವರ್ತಕರಾಗಿದ್ದ ಪ್ರವೀಣ ರಮೇಶ ಶೆಟ್ಟರ (37), ಅವರ ಪತ್ನಿ ರಾಜೇಶ್ವರಿ (30), ಮಕ್ಕಳಾದ ಅಮೃತಾ (8) ಮತ್ತು ಅದ್ವಿಕ್ (5) ಮೃತರು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ‘ವ್ಯಾಪಾರ ಚೆನ್ನಾಗಿತ್ತು. ಹೆಂಡತಿ ಮಕ್ಕಳೊಂದಿಗೆ ಅನ್ಯೂನ್ಯವಾಗಿದ್ದರು’ ಎಂದು ನೆರೆಹೊರೆಯವರು ತಿಳಿಸಿದರು.
ಘಟನಾ ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಡಿಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ನಾಗನಗೌಡ ಕಟ್ಟಿಮನಿಗೌಡ್ರು, ಮುಖಂಡ ಮಲ್ಲಣ್ಣ ಯಾದವಾಡ ಭೇಟಿ ನೀಡಿದ್ದರು.
ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.