ADVERTISEMENT

‘ಉತ್ತಮ ಆರೋಗ್ಯಕ್ಕೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಿ’

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 6:54 IST
Last Updated 19 ಸೆಪ್ಟೆಂಬರ್ 2024, 6:54 IST
ಯಮಕನಮರಡಿ ಸಮೀಪದ ಅತ್ತಿಹಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ತಾಲ್ಲೂಕುಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕಾಂಗ್ರೆಸ್ ಯುವ ಮುಖಂಡ ಕಿರಣ ರಜಪೂತ ಮಾತನಾಡಿದರು
ಯಮಕನಮರಡಿ ಸಮೀಪದ ಅತ್ತಿಹಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ತಾಲ್ಲೂಕುಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕಾಂಗ್ರೆಸ್ ಯುವ ಮುಖಂಡ ಕಿರಣ ರಜಪೂತ ಮಾತನಾಡಿದರು   

ಯಮಕನಮರಡಿ: ‘ಸದೃಢ ದೇಹ, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಿಬೇಕು’ ಎಂದು ಕಾಂಗ್ರೆಸ್ ಯುವ ಮುಖಂಡ ಕಿರಣ ರಜಪೂತ ಹೇಳಿದರು.

ಸಮೀಪದ ಅತ್ತಿಹಾಳ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಮಂಗಳವಾರ ನಡೆದ ಹುಕ್ಕೇರಿ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಕಬಡ್ಡಿ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕ್ರೀಡೆಗಳಲ್ಲಿ ಸೋಲು– ಗೆಲುವು ಸಾಮಾನ್ಯ. ಎರಡನ್ನೂ ಸ್ವೀಕರಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.

ಕ್ಷೇತ್ರ ಸಂಪನ್ಮೂಲ ಅಧಿಕಾರಿ ಬಿ.ಎಸ್.ಪದ್ಮನವರ, ದಯಾನಂದ ಪಾಟೀಲ, ಮಾರುತಿ ಪಾಟೀಲ, ಸಿದ್ದಣ್ಣ ಅಮ್ಮಣಗಿ, ಗಣಪತಿ ಕಾಂಬಳೆ, ಶಿವಲಿಂಗ ಗುಮಚಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಿ.ಆರ್.ಮಠಪತಿ, ಮಹಾಂತೇಶ ಪಾಟೀಲ, ಮಂಜು ಕಾಂಬಳೆ, ಅಪ್ಪು ಸುತಾರ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.