ADVERTISEMENT

ಬೆಳಗಾವಿ | ಪಾಶ್ಚಾಪೂರ ಸೇತುವೆ ಮುಳುಗಡೆ; ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 5:46 IST
Last Updated 6 ಆಗಸ್ಟ್ 2020, 5:46 IST
ಬೆಳಗಾವಿ ಜಿಲ್ಲೆಯ ಪಾಶ್ಚಾಪೂರ ಗ್ರಾಮದ ಸೇತುವೆ ಸಂಪೂರ್ಣವಾಗಿ ಮುಳುಗಿದೆ.
ಬೆಳಗಾವಿ ಜಿಲ್ಲೆಯ ಪಾಶ್ಚಾಪೂರ ಗ್ರಾಮದ ಸೇತುವೆ ಸಂಪೂರ್ಣವಾಗಿ ಮುಳುಗಿದೆ.   

ಬೆಳಗಾವಿ: ನಿರಂತರ ಮಳೆಯಿಂದಾಗಿ ಹುಕ್ಕೇರಿ ತಾಲ್ಲೂಕಿನ ಮಾರ್ಕಂಡೇಯ ಜಲಾಶಯದಿಂದ ನೀರು ಹೊರಬಿಡಲಾಗಿದ್ದು ಹಿಡಕಲ್ ಡ್ಯಾಂ, ಬೆಳಗಾವಿ ಮೊದಲಾದ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಪಾಶ್ಚಾಪೂರ ಗ್ರಾಮದ ಸೇತುವೆ ಸಂಪೂರ್ಣವಾಗಿ ಮುಳುಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದೆ.

ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರವಾಹದ ಮುನ್ನೆಚ್ಚರಿಕೆ ಕ್ರಮವಾಗಿ, ನದಿ ತೀರದಲ್ಲಿರುವ ಪಾಶ್ಚಾಪೂರ, ಕುಂದರಗಿ, ಮಾವನೂರ, ಗೊಡಚಿನಮಲ್ಕಿ ಮುಂತಾದ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆಯಿಂದಿರಲು ಹಾಗೂ ಎತ್ತರದ ಸ್ಥಳಗಳಿಗೆ ಹೋಗಲು ಗ್ರಾಮ ಪಂಚಾಯಿತಿಗಳ ಮುಖಾಂತರ ಡಂಗುರ ಹಾಗೂ ಧ್ವನಿವರ್ಧಕ ಮೂಲಕ ಸೂಚನೆ ನೀಡಲಾಗಿದೆ.

ಪಾಶ್ಚಾಪೂರ ಗ್ರಾಮದ ಸೇತುವೆಯು ಶಿಥಿಲಾವಸ್ಥೆಯಲ್ಲಿದೆ. ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ನಾಲ್ಕೈದು ಬಾರಿ ಜಲಾವೃತವಾಗುವ ಸೇತುವೆಯನ್ನುಎತ್ತರಿಸಿ ಹೊಸದಾಗಿ ನಿರ್ಮಿಸಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ADVERTISEMENT

ವಾಹನಗಳು ಶಾಬಂದರ್- ಬಸಾಪೂರ ಮೂಲಕ ಬಳಸಿಕೊಂಡು ಹಿಡಕಲ್ ಡ್ಯಾಮ್ ಗ್ರಾಮಕ್ಕೆ ಹೋಗುತ್ತಿವೆ ಎಂದು ನಿವಾಸಿ ಎ.ವೈ. ಸೋನ್ಯಾಗೋಳ‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.