ADVERTISEMENT

‘ಜನಸಂಖ್ಯೆ ಹೆಚ್ಚಳದಿಂದ ಅಭಿವೃದ್ಧಿ ಕುಂಠಿತ’

ವಿಶ್ವ ಜನಸಂಖ್ಯಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 12:24 IST
Last Updated 12 ಜುಲೈ 2019, 12:24 IST
ಬೆಳಗಾವಿಯ ಜಿ.ಎ. ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರೊ.ಜಿ.ಕೆ. ಕಡಬಡಿ ಬಹುಮಾನ ವಿತರಿಸಿದರು
ಬೆಳಗಾವಿಯ ಜಿ.ಎ. ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರೊ.ಜಿ.ಕೆ. ಕಡಬಡಿ ಬಹುಮಾನ ವಿತರಿಸಿದರು   

ಬೆಳಗಾವಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಎಫ್‌ಪಿಎಐ (ಪ್ಯಾಮಿಲಿ ಪ್ಲ್ಯಾನಿಂಗ್‌ ಅಸೋಸಿಯೇಶನ್‌ ಆಫ್‌ ಇಂಡಿಯಾ) ಬೆಳಗಾವಿ ಶಾಖೆಯ ಅಧ್ಯಕ್ಷೆ ಅನಿತಾ ಪಾಗಾದ ಹೇಳಿದರು.

ನಗರದ ಜಿ.ಎ. ಕಾಲೇಜಿನಲ್ಲಿಎಫ್‌ಪಿಎಐ ಹಾಗೂ ಕಾಲೇಜಿನ ಎನ್‌ಎಸ್‌ಎಸ್‌ ವಿಭಾಗದ ಸಹಯೋಗದಲ್ಲಿ ಇತ್ತೀಚೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಾಲಕರು ಬಾಲ್ಯ ವಿವಾಹಕ್ಕೆ ಆಸ್ಪದ ನೀಡದೇ, ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು’ ಎಂದರು.

ಶಾಖೆಯ ನಿಕಟಪೂರ್ವ ಅಧ್ಯಕ್ಷ ಪ್ರೊ.ಜಿ.ಕೆ. ಕಡಬಡಿ ಮಾತನಾಡಿ, ‘ಕಾನೂನಿನ ಪ್ರಕಾರ ವಯೋಮಿತಿ ಹೊಂದಿದದವರು ಮಾತ್ರ ವಿವಾಹ ಮಾಡಿಕೊಳ್ಳಬೇಕು. ಮಕ್ಕಳ ಜನನದ ನಡುವೆ ಅಂತರ ಕಾಯ್ದುಕೊಳ್ಳಬೇಕು. ಚಿಕ್ಕ ಕುಟುಂಬಕ್ಕೆ ಆದ್ಯತೆ ನೀಡಬೇಕು. ಇದರಿಂದ ವೈಯಕ್ತಿಕವಾಗಿ ಅನುಕೂಲವಾಗುವುದರ ಜೊತೆಗೆ ದೇಶದ ಜನಸಂಖ್ಯೆ ನಿಯಂತ್ರಣಕ್ಕೂ ಕಡಿವಾಣ ಹಾಕಿದಂತಾಗುತ್ತದೆ’ ಎಂದು ಹೇಳಿದರು.

ADVERTISEMENT

ಕಾಲೇಜಿನ ಪ್ರಾಚಾರ್ಯ ಆರ್‌.ಎಸ್‌. ಪಾಟೀಲ ಮಾತನಾಡಿದರು. ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ನಿಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮೋಹನ ಗುಂಡ್ಲೂರ,ಕೃಷ್ಣ ಗುಮಾಸ್ತೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.