ADVERTISEMENT

ಇನ್ನೊಂದು ಅವಧಿಗೆ ರಾಜ್ಯಸಭಾ ಸ್ಥಾನ ಕೇಳಿದ್ದೇನೆ: ಕೋರೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 20:44 IST
Last Updated 1 ಜೂನ್ 2020, 20:44 IST
ಪ್ರಭಾಕರ ಕೋರೆ
ಪ್ರಭಾಕರ ಕೋರೆ   

ಬೆಳಗಾವಿ: ‘ಇನ್ನೊಂದು ಅವಧಿಗೆ ರಾಜ್ಯಸಭಾ ಸ್ಥಾನ ಕೇಳಿದ್ದೇನೆ. ರಮೇಶ ಕತ್ತಿ ಅವರೂ ಕೇಳಿದ್ದಾರೆ. ಕೇಳುವುದರಲ್ಲಿ ತಪ್ಪೇನಿಲ್ಲ, ಯಾರಿಗೆ ನೀಡಬೇಕು ಎನ್ನುವುದನ್ನು ಪಕ್ಷ ನಿರ್ಧರಿಸಲಿದೆ’ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ತಿಳಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಹತ್ತಾರು ಜನ ಎಂ.ಎಲ್.ಎ ಟಿಕೆಟ್ ಕೇಳಿದ ಹಾಗೆ ಇದನ್ನೂ ಕೇಳಿದ್ದಾರೆ. ಆದರೆ, ಬಿಜೆಪಿ
ಯಲ್ಲಿ ಲಾಬಿ ಮಾಡಲು ಸಾಧ್ಯವೇ ಇಲ್ಲ. ಚಿಕ್ಕೋಡಿ ಲೋಕಸಭಾ ಟಿಕೆಟ್ ಅನ್ನು ನಾನೂ ಕೇಳಿದ್ದೆ. ಆದರೆ, ಸಿಗಲಿಲ್ಲ’ ಎಂದರು.

‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಯತ್ನ ನಡೆದಿಲ್ಲ. ತಮ್ಮ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.