ADVERTISEMENT

ಚಿಂಚಲಿ: ಫುಟ್ಬಾಲ್ ಟೂರ್ನಿ 7ರಿಂದ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 16:27 IST
Last Updated 1 ಜನವರಿ 2021, 16:27 IST
ಚಿಂಚಲಿ ಪಟ್ಟಣದಲ್ಲಿ ಫುಟ್ಬಾಲ್ ಮೈದಾನ ಸಿದ್ಧತೆ ಕಾರ್ಯಕ್ಕೆ ಮುಖಂಡರು ಕೇಕ್ ಕತ್ತರಿಸಿ ಚಾಲನೆ ನೀಡಿದರು
ಚಿಂಚಲಿ ಪಟ್ಟಣದಲ್ಲಿ ಫುಟ್ಬಾಲ್ ಮೈದಾನ ಸಿದ್ಧತೆ ಕಾರ್ಯಕ್ಕೆ ಮುಖಂಡರು ಕೇಕ್ ಕತ್ತರಿಸಿ ಚಾಲನೆ ನೀಡಿದರು   

ಹಂದಿಗುಂದ: ಚಿಂಚಲಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜ. 7ರಿಂದ 9ರವರೆಗೆ ಅಂತರರಾಜ್ಯ ಮಟ್ಟದ ಫುಟ್ಬಾಲ್ ಟೂರ್ನಿ ಆಯೋಜಿಲಾಗಿದೆ.

ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಸಿದ್ಧತೆಗೆ ಶುಕ್ರವಾರ ಚಾಲನೆ ನೀಡಲಾಯಿತು. ವಿಧಾನಪರಿಷತ್ ಸದಸ್ಯ ವಿವೇಕರಾವ ಪಾಟೀಲ ವೀಕ್ಷಿಸಿದರು.

‘ಈ ಭಾಗದ ಯುವಕರಿಗೆ ಪ್ರೇರಣೆ ನೀಡುವ ಉದ್ದೇಶದಿಂದ ವಿಧಾನಪರಿಷತ್ ಸದಸ್ಯ ವಿವೇಕರಾವ ಪಾಟೀಲ ನೇತೃತ್ವದಲ್ಲಿ ಟೂರ್ನಿ ನಡೆಸಲಾಗುತ್ತಿದೆ. 20 ತಂಡಗಳು ಈಗಾಗಲೇ ನೋಂದಾಯಿಸಿವೆ’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಹಾದೇವ ಪಡೋಳಕರ ಹೇಳಿದರು.

ADVERTISEMENT

ಪಟ್ಟಣ ಪಂಚಾಯಿತಿ ಸದಸ್ಯರಾದ ಜಾಕೀರ ತರಡೆ, ತಮ್ಮಣ್ಣ ವಡ್ಡರ, ರಾಜು ಶಿಂಧೆ, ರಾಜು ಬಣಗೆ, ವಿಶ್ವನಾಥ ಪಾಟೀಲ, ರಮೇಶ ಪಾಟೀಲ, ಅಮಿತ ಚೌಗಲಾ, ಸಜಿತ ಪೂಜೇರಿ, ಆದರ್ಶ ಪೂಜೇರಿ, ಅಕ್ಷಯ ಸೌದಲಗಿ, ಸಂಜು ಸೌದಲಗಿ ಶ್ರೀಶೈಲ ಪಾಟೀಲ, ಕುಮಾರ ಹಾರೂಗೇರಿ, ಭೀಮು ಬಣಗೆ, ಅಂತು ಬಣಗೆ, ನವೀನ ಪಟೇಕರಿ, ಅಜಿತ ದಂಡಾಪುರೆ, ಅಜಿತ ಪಾಟೀಲ, ಮಹಾವೀರ ಕೋಳಿ, ಸಂಭಾ ಶಿಂಧೆ, ವಿಶ್ವನಾಥ ಜಲಾಲಪುರೆ, ಮಹಾವೀರ ಹಾರೂಗೇರಿ, ಅಜಿತ ಘೋಗಡಿ, ದಿಗ್ವಿಜಯ ದೇಸಾಯಿ ಹಾಗೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.