ADVERTISEMENT

ಚಿಕ್ಕೋಡಿ: ಹಳೆಯ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 7:33 IST
Last Updated 3 ಅಕ್ಟೋಬರ್ 2021, 7:33 IST
ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ನೌಕರರ ಸಂಘದ ಪದಾಕಾರಿಗಳು ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಿದರು
ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ನೌಕರರ ಸಂಘದ ಪದಾಕಾರಿಗಳು ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಿದರು   

ಚಿಕ್ಕೋಡಿ: ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರುವಂತೆ ಒತ್ತಾಯಿಸಿ ಇಲ್ಲಿನ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳ ಸದಸ್ಯರು ತಹಶೀಲ್ದಾರ್‌ ಮೂಲಕ ಶನಿವಾರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

2006ರಿಂದ ನೂತನ ಪಿಂಚಣಿ ಯೋಜನೆ ಜಾರಿಗೆ ಬಂದಿದ್ದು, ಇದು ಸರ್ಕಾರಿ ನೌಕರರ ಹಾಗೂ ಕುಟುಂಬಸ್ಥರ ಜೀವನ ಅತಂತ್ರಗೊಳಿಸಿದೆ. ಸರ್ಕಾರಿ ನೌಕರರ ಸುಮಾರು 75 ಲಕ್ಷ ಕುಟಂಬ ಸದಸ್ಯರು ಹಾಗೂ 6 ಲಕ್ಷಕ್ಕೂ ಹೆಚ್ಚು ಅವಲಂಬಿತರ ಮೇಲೆ ನೇರ ಪರಿಣಾಮ ಬೀರಿದೆ. ಅದಕ್ಕಾಗಿ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು ಹಳೆಯ ಪಿಂಚಣಿ ಯೋಜನೆ ಶೀಘ್ರ ಜಾರಿಗೊಳಿಸುವಂತೆ ಒತ್ತಾಯಿಸಿದರು.

ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ವೈ.ಎಸ್.ಬುಡ್ಡಗೋಳ, ಎಸ್.ಎನ್.ಬೆಳಗಾವಿ, ಸಿದ್ದು ಧೂಪದಾಳ, ಜಿ.ಎಂ.ಕಾಂಬಳೆ, ಸಿ.ಬಿ.ಅರಭಾವಿ, ಆರ್.ಕೆ.ಕಾಂಬಳೆ, ಎಸ್.ಜಿ.ಮೋಮಿನ, ಅಜಯ ಬೀರನ್ನವರ, ಉಮೇಶ ತೋಟದ, ಮಹೇಶ ವಾಣಿ, ಶಿವಾನಂದ ಸನದಿ, ಬಸವರಾಜ ಕುನ್ನೂರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.