ಸಂಕೇಶ್ವರ: ‘ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಮೃತಪಟ್ಟಿದ್ದಾರೆ. ವೈದ್ಯರ ಮೇಲೆ ಕ್ರಮ ಜರುಗಿಸಬೇಕು’ ಎಂದು ಆರೋಪಿಸಿ ಕುಟುಂಬದವರು, ಶುಕ್ರವಾರ ರಾತ್ರಿ ಸ್ಥಳೀಯ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದರು.
ಕೊಣಕೇರಿ ಗ್ರಾಮದ ಕಿರಣ ಮೋಹನ ಟಿ.ಕೆ. (23) ಮೃತ ಬಾಣಂತಿ. 10 ದಿನಗಳ ಹಿಂದೆ ಅವರು ಗಂಡುಮಗುವಿಗೆ ಜನ್ಮ ನೀಡಿದ್ದರು.
‘ಹೆರಿಗೆ ಬಳಿಕ ಕಿರಣ ಅವರಿಗೆ ಹುಕ್ಕೇರಿ ತಾಲ್ಲೂಕಿನ ನಿಡಸೋಸಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಬಳಿಕ ನಾಲ್ಕು ದಿನಗಳ ಹಿಂದಷ್ಟೇ ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಹೊಟ್ಟೆ ನೋವಿನ ಕಾರಣಕ್ಕೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಿ ಬಾಣಂತಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಕುಟುಂಬದವರು ದೂರಿದ್ದಾರೆ.
ಬಾಣಂತಿ ಶವವನ್ನು ಆಂಬುಲೆನ್ಸ್ನಲ್ಲಿಯೇ ಸಂಕೇಶ್ವರ ಪೊಲೀಸ್ ಠಾಣೆಯ ಎದುರು ತಂದು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.