ADVERTISEMENT

ಶಂಕರ್‌ಗೆ ಟಿಕೆಟ್‌: ರಮೇಶ ಜಾರಕಿಹೊಳಿ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 13:30 IST
Last Updated 15 ಜೂನ್ 2020, 13:30 IST

ಬೆಳಗಾವಿ: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಆರ್. ಶಂಕರ್‌ ಅವರಿಗೆ ಟಿಕೆಟ್‌ ಸಿಗುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಎಂ.ಟಿ.ಬಿ. ನಾಗರಾಜ್‌ ಹಾಗೂ ಎಚ್‌.ವಿಶ್ವನಾಥ್‌ ಅವರನ್ನೂ ಹೈಕಮಾಂಡ್ ಪರಿಗಣಿಸುತ್ತದೆ ಎನ್ನುವ ಆಶಾಭಾವವಿದೆ. ನಾನು, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದ ನಾಯಕರ ಪರವಾಗಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT