ಅಥಣಿ (ಬೆಳಗಾವಿ ಜಿಲ್ಲೆ): ಇಲ್ಲಿನ ಬ್ಲಾಕ್ ಕಾಂಗ್ರೆಸ್ ಮುಖಂಡರು ಪುರಸಭೆ ಆವರಣದಲ್ಲಿ 50 ಪೌರಕಾರ್ಮಿಕರ ಪಾದ ಪೂಜಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನವನ್ನು ವಿನೂತನವಾಗಿ ಶನಿವಾರ ಆಚರಿಸಿದರು.
‘ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತಿನಂತೆ ನಿಜ ಶ್ರಮಜೀವಿಗಳಾದ ಪೌರಕಾರ್ಮಿಕರ ಪಾದ ಪೂಜೆ ಮಾಡುವುದು ನಿಜವಾದ ಪರಮಾತ್ಮನನ್ನು ಪೂಜಿಸಿದಂತೆಯೇ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ ಹೇಳಿದರು.
ಪೌರಕಾರ್ಮಿಕರಿಗೆ ಅಭಿನಂದನಾ ಪತ್ರವನ್ನೂ ನೀಡಲಾಯಿತು.
ಮುಖಂಡ ಗಜಾನನ ಮಂಗಸೂಳಿ, ‘ಕೋವಿಡ್ ಭೀತಿ ನಡುವೆಯೂ ಪೌರಕಾರ್ಮಿಕರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಅವರ ಕಾರ್ಯ ಶ್ಲಾಘನೀಯ’ ಎಂದರು.
ಮುಖಂಡ ಸುನಿಲ ಸಂಕ, ಪೌರಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕಾಂಬಳೆ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಮಾತನಾಡಿದರು.
ಮುಖಂಡರಾದ ಅನಿಲ ಸುಣದೋಳಿ, ಧರೆಪ್ಪ ಠಕ್ಕಣ್ಣವರ, ಬಸವರಾಜ ಬುಟಾಳಿ, ರಾಬಸಾಬ ಐಹೊಳೆ, ಅಸ್ಲಂ ನಾಲಬಂದ, ರಾಜು ಜಮಖಂಡಿಕರ, ನಿಶಾಂತ ದಳವಾಯಿ, ಶ್ರೀಕಾಂತ ಪೂಜಾರಿ, ಗೌತಮ ಪರಾಂಜಪೆ, ವಿಲೀನರಾಜ ಯಳಮಲ್ಲೆ, ಕಪಿಲ ಘಟಕಾಂಬಳೆ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.