ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ.ಮಂಗಳವಾರ ರಾತ್ರಿಯಿಂದಲೂ ಜಿಟಿಜಿಟಿ ಮಳೆಯಾಗುತ್ತಿದೆ.
ಕೋವಿಡ್ ಕಾರಣದಿಂದಾಗಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಬೆಳಿಗ್ಗೆ 10ರವರೆಗೆ ಅವಕಾಶ ನೀಡಲಾಗಿತ್ತು. ಮಳೆಯ ಕಾರಣದಿಂದಾಗಿ ಗ್ರಾಹಕರು, ರೈತರು ಹಾಗೂ ಬೀದಿಬದಿ ತರಕಾರಿ ವ್ಯಾಪಾರಿಗಳಿಗೆ ಅಡ್ಡಿ ಉಂಟಾಯಿತು.
ಬೈಲಹೊಂಗಲ, ಗೋಕಾಕ, ಚಿಕ್ಕೋಡಿ, ಹಿರೇಬಾಗೇವಾಡಿ, ಖಾನಾಪುರ, ಹುಕ್ಕೇರಿ, ಮುನವಳ್ಳಿ, ಸವದತ್ತಿ, ಎಂ.ಕೆ. ಹುಬ್ಬಳ್ಳಿ, ಕಿತ್ತೂರು ಭಾಗದಲ್ಲೂ ಮಳೆಯಾಗುತ್ತಿದೆ.
ಘಟಪ್ರಭಾ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಬುಧವಾರ ಬೆಳಿಗ್ಗೆ 7558 ಕ್ಯುಸೆಕ್ ಒಳಹರಿವು ಇತ್ತು.ಮಳೆಯಿಂದಾಗಿ, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಗರಿಗೆದರಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.