ADVERTISEMENT

ಚಿಕ್ಕೋಡಿ: ಮುಳುಗಡೆ ಸ್ಥಿತಿಯಲ್ಲಿ 7 ಸೇತುವೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2019, 11:44 IST
Last Updated 7 ಜುಲೈ 2019, 11:44 IST

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆ ಮುಂದುವರಿಯಿತು.

ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದೆ. ಹೀಗಾಗಿ ಆ ರಾಜ್ಯದ ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಜಾಸ್ತಿಯಾಗಿದೆ. 36,066 ಕ್ಯುಸೆಕ್‌ ನೀರು ಹರಿಬಿಡಲಾಗಿದೆ.

ಕೃಷ್ಣಾ ನದಿಗೆ ಕಲ್ಲೋಳ ಬಳಿ ನಿರ್ಮಿಸಲಾದ ಕಲ್ಲೋಳ–ಯಡೂರ, ವೇದ ಹಾಗೂ ದೂಧ್‌ಗಂಗಾ ನದಿಗೆ ಕಾರದಗಾದಲ್ಲಿ ನಿರ್ಮಿಸಿರುವ ಕಾರದಗಾ–ಭೋಜ, ವೇದಗಂಗಾ ನದಿಗೆ ಭೋಜದಲ್ಲಿ ಕಟ್ಟಿರುವ ಭೋಜವಾಡಿ–ಕುನ್ನೂರ, ಸಿದ್ನಾಳ ಬಳಿಯ ಸಿದ್ನಾಳ–ಅಕ್ಕೋಳ, ಜತ್ರಾಟದಲ್ಲಿನ ಜತ್ರಾಟ–ಭಿವಶಿ, ದೂಧ್‌ಗಂಗಾ ನದಿಗೆ ಮಲ್ಲಿಕವಾಡ ಬಳಿ ನಿರ್ಮಿಸಿರುವ ಮಲಿಕವಾಡ–ದತ್ತವಾಡ ಸೇತುವೆಗಳು ಮುಳುಗಡೆ ಸ್ಥಿತಿಯಲ್ಲಿವೆ. ಇವು ಚಿಕ್ಕ ಬ್ರಿಡ್ಜ್‌ ಕಮ್ ಬ್ಯಾರೇಜ್‌ಗಳಾಗಿವೆ. ಪರ್ಯಾಯ ರಸ್ತೆಗಳಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿಲ್ಲ; ಗ್ರಾಮಗಳ ಸಂಪರ್ಕ ಕಡಿತಗೊಂಡಿಲ್ಲ.

ADVERTISEMENT

ಖಾನಾಪುರ ತಾಲ್ಲೂಕಿನಾದ್ಯಂತ ಸತತ ವರ್ಷಧಾರೆಯಾಗಿದೆ. ಉಳಿದಂತೆ ಬೆಳಗಾವಿ ತಾಲ್ಲೂಕು, ಬೈಲಹೊಂಗಲ, ಹಿರೇಬಾಗೇವಾಡಿ, ಚನ್ನಮ್ಮನ ಕಿತ್ತೂರು, ಎಂ.ಕೆ. ಹುಬ್ಬಳ್ಳಿ ಪರಿಸರದಲ್ಲಿ ಮಳೆ ಬಿದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.