ADVERTISEMENT

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು: ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 13:09 IST
Last Updated 24 ಜೂನ್ 2021, 13:09 IST
ಮುರುಘರಾಜೇಂದ್ರ ಸ್ವಾಮೀಜಿ
ಮುರುಘರಾಜೇಂದ್ರ ಸ್ವಾಮೀಜಿ   

ಗೋಕಾಕ (ಬೆಳಗಾವಿ ಜಿಲ್ಲೆ): ‘ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು’ ಎಂದು ಇಲ್ಲಿನ ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ಆಗ್ರಹಿಸಿದರು.

ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಈ ಬಾರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ ಅವರ ಪಾತ್ರ ಬಹಳ ದೊಡ್ಡದು. ಇದನ್ನು ರಾಜ್ಯದ ಜನರೊಂದಿಗೆ ಬಿಜೆಪಿಯವರೂ ಒಪ್ಪುತ್ತಾರೆ. ಅವರು ಅಭಿವೃದ್ಧಿ ವಿಷಯದಲ್ಲಿ ವೇಗದಲ್ಲಿದ್ದುದು ಬಹಳ ಮಂದಿಗೆ ಸಹಿಸಲಾಗಲಿಲ್ಲ ಎನಿಸುತ್ತದೆ. ಅವರಿಗೆ ಅನ್ಯಾಯವಾಗಿದೆ’ ಎಂದರು.

‘ಅವರು ಆರೋಪ ಮುಕ್ತರಾಗುತ್ತಾರೆ ಎನ್ನುವ ಆತ್ಮವಿಶ್ವಾಸವಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.