ಬೆಳಗಾವಿ: ಎಂಟು ದಿನಗಳಿಂದ ಕಣ್ಮರೆಯಾಗಿದ್ದ ಶಾಸಕ ರಮೇಶ ಜಾರಕಿಹೊಳಿ ಮಂಗಳವಾರ ರಾತ್ರಿ ಗೋಕಾಕದಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾಗಿದ್ದರು ಎಂದು ಮೂಲಗಳು ತಿಳಿಸಿವೆ.
ರಾತ್ರಿ 9 ಗಂಟೆ ಹೊತ್ತಿಗೆ ಕಾರಿನಲ್ಲಿ ತಮ್ಮ ಪುತ್ರ ಅಮರನಾಥ ಹಾಗೂ ಕುಟುಂಬ ಸದಸ್ಯರ ಜೊತೆ ಬಂದಿಳಿದ ರಮೇಶ ಅವರು, ರಾತ್ರಿ ಊಟ ಮಾಡಿ ಮಲಗಿಕೊಂಡರು. ಬುಧವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ತೆರಳಿದರು. ಬಹುಶಃ ಬೆಂಗಳೂರಿನತ್ತ ಹೋಗಿರಬಹುದು ಎಂದು ಮೂಲಗಳು ಹೇಳಿವೆ.
ನಾನು ಪಕ್ಷ ಬಿಡಲ್ಲ– ಸತೀಶ:‘ರಮೇಶ ಕಾಂಗ್ರೆಸ್ಗೆ ರಾಜೀನಾಮೆ ನೀಡುವುದಿಲ್ಲ. ಹಾಗೊಂದು ವೇಳೆ ರಾಜೀನಾಮೆ ಕೊಟ್ಟರೆ ಅದಕ್ಕೂ ನಮಗೂ ಸಂಬಂಧವಿಲ್ಲ. ನಾವು ಪಕ್ಷದಲ್ಲಿಯೇ ಮುಂದುವರಿಯುತ್ತೇವೆ’ ಎಂದು ಸಹೋದರ, ಸಚಿವ ಸತೀಶ ಜಾರಕಿಹೊಳಿ ಗೋಕಾಕದಲ್ಲಿ ಸುದ್ದಿಗಾರರಿಗೆ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.