ADVERTISEMENT

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ: ಬಿಜೆಪಿ ಪ್ರಮುಖರ ಸಭೆ; ರಮೇಶ ಗೈರು

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 13:17 IST
Last Updated 19 ಜುಲೈ 2021, 13:17 IST
ಗೋಕಾಕ ಶಾಸಕ ರಮೇಶ ಜಾರಕಿಹೊಳಿ
ಗೋಕಾಕ ಶಾಸಕ ರಮೇಶ ಜಾರಕಿಹೊಳಿ   

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಆಡಳಿತಾರೂಢ ಬಿಜೆಪಿ ಪ್ರಮುಖರ ಸಭೆ ಇಲ್ಲಿ ಸೋಮವಾರ ಜರುಗಿದೆ.

ಬೆಳಗಾವಿ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪಕ್ಷದ ಪ್ರಮುಖರ ಸಭೆ ಗೋಪ್ಯವಾಗಿ ನಡೆದಿರುವುದು ಹಲವು ವಿಶ್ಲೇಷಣೆಗೆ ಮತ್ತು ಚರ್ಚೆಗಳಿಗೆ ಗ್ರಾಸವಾಗಿದೆ.

ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ನೇತೃತ್ವದಲ್ಲಿ ನಡೆದ ಚರ್ಚೆಯಲ್ಲಿ ಸಚಿವ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಮಹೇಶ ಕುಮಠಳ್ಳಿ, ದುರ್ಯೋಧನ ಐಹೊಳೆ, ಪಿ. ರಾಜೀವ, ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗಿಯಾಗಿದ್ದರು.

ADVERTISEMENT

ಮುಖ್ಯವಾಗಿ, ಮುಂಬರುವ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಈ ಭಾಗದ ಪ್ರಭಾವಿಯಾದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಭೆಯಿಂದ ದೂರ ಉಳಿದಿದ್ದು, ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.