ADVERTISEMENT

ನಮ್ಮಣ್ಣ ಉಮೇಶ ಕತ್ತಿ ಡೈಮಂಡ್; ಈ ಬಾರಿ ಮಂತ್ರಿ ಸ್ಥಾನ ಸಿಗಲಿದೆ: ರಮೇಶ ಕತ್ತಿ

ನಮ್ಮಣ್ಣ ಉಮೇಶ ಕತ್ತಿ ಡೈಮಂಡ್; ಈ ಬಾರಿ ಮಂತ್ರಿ ಸ್ಥಾನ ಸಿಗುತ್ತದೆ: ರಮೇಶ ಕತ್ತಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 11:10 IST
Last Updated 14 ನವೆಂಬರ್ 2020, 11:10 IST
ರಮೇಶ ಕತ್ತಿ
ರಮೇಶ ಕತ್ತಿ   

ಬೆಳಗಾವಿ: ‘ನಮ್ಮಣ್ಣ, ಹಿರಿಯ ಶಾಸಕ ಉಮೇಶ ಕತ್ತಿ ಡೈಮಂಡ್. ಅವರಿಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ಬಾರಿ ಬಿಜೆಪಿ ಸರ್ಕಾರ ರಚನೆಯಾಗಲು 17 ಮಂದಿ ಹೊರಗಿನಿಂದ ಬಂದವರು ಕಾರಣ. ಅವರಿಗೆ ಅವಕಾಶ ಕೊಡಬೇಕಿರುವುದರಿಂದ ನಮ್ಮಣ್ಣ ತ್ಯಾಗ ಮಾಡಿದ್ದಾರೆ. ಪಕ್ಷವು ನಮಗೆ ಇಷ್ಟೆಲ್ಲ ಕೊಟ್ಟಾಗ ನಾವೂ ಸ್ವಲ್ಪ ತ್ಯಾಗ ಮಾಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಸಹೋದರನಿಗೆ ಸೂಕ್ತ ಸ್ಥಾನಮಾನ ಕೊಡುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

ಪ್ರತ್ಯೇಕವಾಗಿ ಮಾತನಾಡಿದ ಉಮೇಶ ಕತ್ತಿ, ‘ನನ್ನ ಅನುಭವ ಹಾಗೂ ಯೋಗ್ಯತೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುತಿಸುತ್ತಾರೆ. ಸಂಪುಟದಲ್ಲಿ ಸ್ಥಾನ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ಆದರೆ, ಇದಕ್ಕಾಗಿ ಲಾಬಿ ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.