ADVERTISEMENT

ರಮೇಶ ಜಾರಕಿಹೊಳಿ‌ ಲಕ್ಷ್ಮಣರೇಖೆ ದಾಟಿಲ್ಲ: ಮಹೇಶ ಕುಮುಠಳ್ಳಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 14:13 IST
Last Updated 3 ಜೂನ್ 2019, 14:13 IST
ಮಹೇಶ ಕುಮುಠಳ್ಳಿ
ಮಹೇಶ ಕುಮುಠಳ್ಳಿ   

ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ‌ ಲಕ್ಷ್ಮಣರೇಖೆ ದಾಟಿಲ್ಲ’ ಎಂದು ಅಥಣಿ ಶಾಸಕ ಮಹೇಶ ಕುಮುಠಳ್ಳಿ ಹೇಳಿದರು.

ಭಾನುವಾರ ಇಲ್ಲಿ ಮಾತನಾಡಿದ್ದ ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿಕೆಗೆ ಸೋಮವಾರ ಪ್ರತ್ಯುತ್ತರ ನೀಡಿದ ಅವರು, ‘ನಮ್ಮ ನಾಯಕ ರಮೇಶ ಎಲ್ಲಿಯೂ ಹೋಗಿಲ್ಲ. ಪಕ್ಷದಲ್ಲಿಯೇ ಇದ್ದಾರೆ. ಕೆಲವರು ವಿನಾಕಾರಣ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂದರು.

‘ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ. ಯಾವ ಜವಾಬ್ದಾರಿ ಕೊಟ್ಟರೂ ಅವರು ನಿಭಾಯಿಸುತ್ತಾರೆ. ಆದರೆ, ನಾನು ಯಾವುದೇ ಸಚಿವ ಸ್ಥಾನ, ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಗಾದಿಯ ಆಕಾಂಕ್ಷಿಯಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.