ಖಾನಾಪುರ: ತಾಲ್ಲೂಕಿನ ಬೀಡಿ ಗ್ರಾಮದಿಂದ ಚನ್ನಮ್ಮನ ಕಿತ್ತೂರು ಪಟ್ಟಣದತ್ತ ಸಾಗಿಸುತ್ತಿದ್ದ 25 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ನಂದಗಡ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇಲೆ ಬೀಡಿ-ಕಿತ್ತೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳ ತಪಾಸಣೆ ನಡೆಸಿದಾಗ ಬೈಲಹೊಂಗಲ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಪಡಿತರ ಅಕ್ಕಿ ಇರುವುದು ಪತ್ತೆಯಾಯಿತು. ಘಟನೆಗೆ ಸಂಬಂಧಿಸಿದಂತೆ ಚ.ಕಿತ್ತೂರು ತಾಲ್ಲೂಕಿನ ದೇಗಾಂವ ಗ್ರಾಮದ ಶಿವಾನಂದ ಕಡತನಾಳ ಮತ್ತು ಸುರೇಶ ಕಡತನಾಳ ಎಂಬುವರನ್ನು
ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಈ ಕುರಿತು ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.