ADVERTISEMENT

ಬೆಳಗಾವಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ: ಹೋರಾಟಕ್ಕೆ ಕರವೇ ಕಾರ್ಯಕರ್ತರು ಸಜ್ಜು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 4:37 IST
Last Updated 20 ಡಿಸೆಂಬರ್ 2021, 4:37 IST
ಕ್ರಾಂತಿವೀರ ‌ಸಂಗೊಳ್ಳಿರಾಯಣ್ಣ‌ ಪ್ರಯಿಮೆ ಭಗ್ನ ಆಗಿದ್ದ ಸಂದರ್ಭ
ಕ್ರಾಂತಿವೀರ ‌ಸಂಗೊಳ್ಳಿರಾಯಣ್ಣ‌ ಪ್ರಯಿಮೆ ಭಗ್ನ ಆಗಿದ್ದ ಸಂದರ್ಭ   

ಬೆಳಗಾವಿ: ಇಲ್ಲಿನ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ‌ಸಂಗೊಳ್ಳಿ ರಾಯಣ್ಣ‌ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗೂ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದಾರೆ.

ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಧಾರವಾಡದಿಂದ ಬೆಳಗಾವಿಯತ್ತ ಹೊರಟಿದ್ದಾರೆ. ಅವರನ್ನು ಹಿರೇಬಾಗೇವಾಡಿ ಟೋಲ್ ಬಳಿಯೇ ತಡೆಯುವುದಕ್ಕಾಗಿ ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಸಾಧ್ಯತೆ‌ ಇದೆ.

ಇನ್ನೊಂದೆಡೆ, ಮೂರು ಕೃಷಿ ಕಾಯ್ದೆಗಳನ್ನು ರಾಜ್ಯದಲ್ಲೂ ವಾಪಸ್ ಪಡೆಯುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಣಿ ಚನ್ನಮ್ಮ ವೃತ್ತದಲ್ಲಿ ಬಾರುಕೋಲು‌‌ ಚಳವಳಿ ನಡೆಸಲು ಕನ್ನಡ ಸಾಹಿತ್ಯ ಭವನದ ಬಳಿ ಸೇರುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.