ADVERTISEMENT

ರಾಯಬಾಗ | ₹80 ಸಾವಿರ ಲಂಚ; ಎಸ್‌ಡಿಎ ಚಂದ್ರಶೇಖರ ಮುರಟಗಿ ಬಂಧನ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 23:49 IST
Last Updated 27 ಜನವರಿ 2026, 23:49 IST
ಚಂದ್ರಶೇಖರ ಮುರಟಗಿ 
ಚಂದ್ರಶೇಖರ ಮುರಟಗಿ    

ರಾಯಬಾಗ (ಬೆಳಗಾವಿ ಜಿಲ್ಲೆ): ಪಟ್ಟಣದ ತಹಶೀಲ್ದಾರ್ ಕಚೇರಿಯ ಎಸ್‌ಡಿಎ ಚಂದ್ರಶೇಖರ ಮುರಟಗಿ ₹80 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

‘ಭೂ ದಾಖಲೆ ಸಂಬಂಧಿಸಿದ ಕೆಲಸಕ್ಕೆ ₹ 1 ಲಕ್ಷ ನೀಡುವಂತೆ ರೈತ ಶಿವಾನಂದ ದುಂಡಗಿ ಅವರಿಗೆ ಆರೋಪಿಯು ಬೇಡಿಕೆ ಇಟ್ಟಿದ್ದರು.  ₹80 ಸಾವಿರ ಲಂಚ ಪಡೆಯುವಾಗ ಕಾರ್ಯಾಚರಣೆ ನಡೆಸಿ, ಬಂಧಿಸಿದೆವು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ದಾಳಿ ವೇಳೆ ಕಚೇರಿಯ ಕೆಲ ದಾಖಲೆಗಳನ್ನು ಪರಿಶೀಲಿಸಿದ್ದು, ಮ್ಯೂಟೇಷನ್, ಪಹಣಿ ತಿದ್ದುಪಡಿ ಸೇರಿ ಕಂದಾಯಕ್ಕೆ ಸಂಬಂಧಿಸಿದ ಕಡತಗಳನ್ನು ವಶಕ್ಕೆ ಪಡೆದುಕೊಂಡರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.