ADVERTISEMENT

ತನಿಖೆ ನಡೆಸಲು ಆರ್‌ಸಿಯು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 9:40 IST
Last Updated 9 ಆಗಸ್ಟ್ 2020, 9:40 IST

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಎಂ. ತ್ಯಾಗರಾಜ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತನಿಖೆ ನಡೆಸಲು ಸಿಂಡಿಕೇಟ್ ಸಭೆ ಈಚೆಗೆ ತೀರ್ಮಾನ ಕೈಗೊಂಡಿದೆ.

‘ತ್ಯಾಗರಾಜ ಅವರು ಸುಳ್ಳು ಶೈಕ್ಷಣಿಕ ಪ್ರಮಾಣಪತ್ರ ನೀಡಿ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥ ಹುದ್ದೆ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಕಾರಣದಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಜುಲೈ 23ರಂದು ಕುಲಪತಿ ಮತ್ತು ಕುಲಸಚಿವರಿಗೆ ಪತ್ರ ಬರೆದಿದ್ದರು. ಯುಜಿಸಿ ಮಾರ್ಗಸೂಚಿ ಅನುಸರಿಸುವಂತೆ ಒತ್ತಾಯಿಸಿದ್ದರು. ಇದನ್ನು ಆಧರಿಸಿ ತನಿಖೆಗೆ ನಿರ್ಧರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯೆಗೆ ತ್ಯಾಗರಾಜ ಲಭ್ಯವಾಗಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.