ADVERTISEMENT

ತಂದೆ–ತಾಯಿ ಕಳೆದುಕೊಂಡವರಿಗೆ ಶುಲ್ಕ ವಿನಾಯಿತಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 7:00 IST
Last Updated 15 ಜೂನ್ 2021, 7:00 IST
ಪ್ರೊ.ಎಂ. ರಾಮಚಂದ್ರಗೌಡ
ಪ್ರೊ.ಎಂ. ರಾಮಚಂದ್ರಗೌಡ   

ಬೆಳಗಾವಿ: ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿರುವ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್- 19ನಿಂದ ತಂದೆ ಹಾಗೂ ತಾಯಿ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಪ್ರಕಟಿಸಿದೆ.

‘ಪದವಿ, ಸ್ನಾತಕೋತ್ತರ ಪದವಿಗೆ ಈ ಶೈಕ್ಷಣಿಕ ವರ್ಷದಿಂದ ಪ್ರವೇಶ ಪಡೆಯಲಿರುವ ಮತ್ತು ಈಗಾಗಲೇ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ.

‘ವಿಶ್ವವಿದ್ಯಾಲಯದ ವ್ಯಾಪ್ತಿಯ ಮೂರು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಲಾಗುವುದು. ಇದಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೊರೊನಾದಿಂದ ಆಸರೆ ಕಳೆದುಕೊಂಡವರಿಗೆ ಮಾನವೀಯತೆಯ ಆಧಾರದ ಮೇಲೆ ನೆರವಾಗುತ್ತಿದ್ದೇವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.