ADVERTISEMENT

ಕೆರೆಗಳ ಅಭಿವೃದ್ಧಿಗೆ ಅನುದಾನ: ಮನವಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 12:33 IST
Last Updated 4 ಸೆಪ್ಟೆಂಬರ್ 2019, 12:33 IST

ಬೆಳಗಾವಿ: ಹೊರವಲಯದ ಬಸವನಕುಡಚಿಯ 3, ಅಲಾರವಾಡ, ಕಣಬರಗಿ, ಮುತ್ಯಾನಟ್ಟಿಯ ತಲಾ ಒಂದು ಸೇರಿ 6 ಕೆರೆಗಳು ಪ್ರವಾಹದಿಂದ ಹಾನಿಗೊಳಗಾಗಿವೆ. ಅವುಗಳ ದುರಸ್ತಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಬುಧವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

‘ಕೆರೆಗಳ ಹಾನಿಯಿಂದ ಸುತ್ತಮುತ್ತಲಿನ ಬೆಳೆಗಳು ಹಾನಿಯಾಗಿ ರೈತರಿಗೆ ನಷ್ಟ ಸಂಭವಿಸಿದೆ. ಅವುಗಳ ಅಭಿವೃದ್ಧಿಗೆ ತಕ್ಷಣ ₹ 3 ಕೋಟಿ ವಿಶೇಷ ಅನುದಾನ ನೀಡಬೇಕು’ ಎಂದು ಕೋರಿದರು.

ಯಳ್ಳೂರು ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆ ಯೋಜನೆಗೆ ಅಗತ್ಯ ಅನುದಾನ ನೀಡುವಂತೆ ಶಾಸಕ ಅಭಯ ಪಾಟೀಲ ಮನವಿ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.