ADVERTISEMENT

ಬೆಳಗಾವಿ: ನಿವೃತ್ತ ನೌಕರರ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 6:55 IST
Last Updated 5 ಫೆಬ್ರುವರಿ 2023, 6:55 IST

ಬೆಳಗಾವಿ: ಇಲ್ಲಿನ ನಾಗನೂರು ರುದ್ರಾಕ್ಷಿಮಠದ ಪ್ರಭುದೇವ ಕಲ್ಯಾಣ ಮಂಟಪದಲ್ಲಿ ಫೆ.5ರಂದು ಬೆಳಿಗ್ಗೆ 11ಕ್ಕೆ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಬೆಳಗಾವಿ ವಿಭಾಗದ ನಿವೃತ್ತ ನೌಕರರ ಸಮಾವೇಶ ನಡೆಯಲಿದೆ.

ಕೊರಟಗೆರೆಯ ಬಸವಕಿರಣ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಲ್.ಭೈರಪ್ಪ ಉದ್ಘಾಟಿಸುವರು. ಸಂಘದ ಬೆಳಗಾವಿ ವಿಭಾಗದ ಅಧ್ಯಕ್ಷ ಎಸ್.ಜಿ.ಸಿದ್ನಾಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಡಾ.ರವಿ ಪಾಟೀಲ ಆಗಮಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT