ADVERTISEMENT

ಅಪಘಾತ: ಬೆಳಗಾವಿ ಜಿಲ್ಲೆಯ ಆರು ಮಂದಿ ಸಾವು

road accident

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2019, 20:15 IST
Last Updated 12 ಸೆಪ್ಟೆಂಬರ್ 2019, 20:15 IST
   

ಸಂಕೇಶ್ವರ (ಬೆಳಗಾವಿ ಜಿಲ್ಲೆ): ಮಹಾರಾಷ್ಟ್ರದ ಸಾತಾರಾದಲ್ಲಿ ಗುರುವಾರ ಬೆಳಗಿನ ಜಾವ ಲಾರಿ ಹಾಗೂ ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಆರು ಮಂದಿ ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ.

ಮುಂಬೈನಿಂದ ಬೆಳಗಾವಿಗೆ ಹೊರಟ್ಟಿದ್ದ ಬಸ್‌, ಸಾತಾರಾದ ಪೆಟ್ರೋಲ್‌ ಬಂಕ್‌ ಬಳಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಾಗ ಬಸ್‌ನಲ್ಲಿದ್ದವರು ಮೃತಪಟ್ಟಿದ್ದಾರೆ.

ಸಂಕೇಶ್ವರದ ವೈದ್ಯ ಸಚಿನ್‌ ಪಾಟೀಲ, ವರ್ತಕ ವಿಶ್ವನಾಥ ಗಡ್ಡಿ, ಬೆಳಗಾವಿಯ ಅಬ್ಬಾಸ ಕಟಗಿ, ರವೀಂದ್ರ ಕರಿಗಾರ, ಅಶೋಕ ಜುನಗಾರೆ ಹಾಗೂ ಗುಂಡು ತುಕಾರಾಮ ಗಾವಡೆ ಮೃತರು. ಗಾಯಗೊಂಡವರಲ್ಲಿ ಸಂಕೇಶ್ವರದ ವರ್ತಕ ಬಸವರಾಜ ಬಾಗಲಕೋಟೆ ಅವರೂ ಸೇರಿದ್ದಾರೆ. ಸಾತಾರಾದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.