ಬೆಳಗಾವಿ: ನಗರದ ಸಾಂಬ್ರಾ ರಸ್ತೆಯಲ್ಲಿ ಶನಿವಾರ ರಾತ್ರಿ ಬೈಕಿಗೆ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಗರಕ್ಕೆ ಕಟ್ಟಡ ಕೆಲಸಕ್ಕೆ ಬಂದಿದ್ದ ವಿಠ್ಠಲ ಮೃತಪಟ್ಟವರು. ಅವರು ಸಾಂಬ್ರಾ ಮೂಲದವರು ಎನ್ನುವುದನ್ನು ಬಿಟ್ಟರೆ ಹೆಚ್ಚಿನ ವಿವರ ಗೊತ್ತಾಗಿಲ್ಲ.
ನಾಲ್ಕು ದಿನಗಳ ಹಿಂದಷ್ಟೇ ಲಾರಿ ಹಾಯ್ದು ಒಬ್ಬ ಕಾಲೇಜು ವಿದ್ಯಾರ್ಥಿನಿ, ಎರಡು ದಿನಗಳ ಹಿಂದೆ ಮತ್ತೊಬ್ಬ ಶಾಲಾ ವಿದ್ಯಾರ್ಥಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದರು.
ನಗರದಲ್ಲಿ ಭಾರಿ ವಾಹನಗಳ ಉಪಟಳದಿಂದ ಈಗ ಮತ್ತೊಬ್ಬ ಕಾರ್ಮಿಕನ ಬಲಿಯಾಗಿದೆ.
ಬೆಳಗಾವಿ- ಸಾಂಬ್ರಾ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ವಿಪರೀತವಾಗಿದೆ. ಇಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ವಹಿಸಬೇಕು ಎಂದು ಜನ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.