ADVERTISEMENT

₹ 4.50 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಮಂಗಸೂಳಿಯಲ್ಲಿ ಸಮುದಾಯ ಭವನ ನಿರ್ಮಾಣ, ಮೂಲಸೌಕರ್ಯಕ್ಕೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:56 IST
Last Updated 7 ಆಗಸ್ಟ್ 2022, 7:56 IST
ಕಾಗವಾಡ ತಾಲ್ಲೂಕಿನ ಮಂಗಸೂಳಿಯ ಮಲ್ಲಯ್ಯ ದೇವಸ್ಥಾನದ ಸಮುದಾಯ ಭವನ ಹಾಗೂ ವಿವಿಧ ಕಾಮಗಾರಿಗಳಿಗೆ ಶಾಸಕ ಶ್ರೀಮಂತ ಪಾಟೀಲ ಶುಕ್ರವಾರ ಭೂಮಿಪೂಜೆ ನೆೆರವೇರಿಸಿದರು
ಕಾಗವಾಡ ತಾಲ್ಲೂಕಿನ ಮಂಗಸೂಳಿಯ ಮಲ್ಲಯ್ಯ ದೇವಸ್ಥಾನದ ಸಮುದಾಯ ಭವನ ಹಾಗೂ ವಿವಿಧ ಕಾಮಗಾರಿಗಳಿಗೆ ಶಾಸಕ ಶ್ರೀಮಂತ ಪಾಟೀಲ ಶುಕ್ರವಾರ ಭೂಮಿಪೂಜೆ ನೆೆರವೇರಿಸಿದರು   

ಕಾಗವಾಡ: ಚುನಾವಣೆಗಿಂತ ಮುಂಚಿತವಾಗಿ ನಾನು ಕಾಗವಾಡ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದಕ್ಕೆ ತಕ್ಕಷ್ಟು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಶ್ರೀಮಂತ ಪಾಟೀಲ ಹೇಳಿದರು.

ತಾಲ್ಲೂಕಿನ ಮಂಗಸೂಳಿ ಗ್ರಾಮದ ಮಲ್ಲಯ್ಯ ದೇವಸ್ಥಾನದ ಆವರಣದಲ್ಲಿ ನೀರಾವರಿ ನಿಗಮದ ವತಿಯಿಂದ ಕೈಗೆತ್ತಿಕೊಂಡ ₹ 4.50 ಕೋಟಿ ವೆಚ್ಚದ ಸಮುದಾಯ ಭವನ ಹಾಗೂ ಮೂಲ ಸೌಲಭ್ಯಗಳ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಮಂಗಸೂಳಿ ಮಲ್ಲಯ್ಯ ದೇವಸ್ಥಾನವು ಅತ್ಯಂತ ಪ್ರಸಿದ್ಧಿ ಪಡೆದುಕೊಂಡಿದೆ. ದೇವರ ದರ್ಶನಕ್ಕೆ ದಿನವೂ ಸಾವಿರಾರು ಭಕ್ತರು ಬರುತ್ತಾರೆ. ಭಕ್ತರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಅನುದಾನ ನೀಡಲಾಗಿದೆ. ಈ ಭಾಗದಲ್ಲಿಯೇ ಮಾದರಿ ವ್ಯವಸ್ಥೆಯುಳ್ಳ ದೇವಸ್ಥಾನವಾಗಿ ಮಾರ್ಪಾಡು ಮಾಡಲಾಗುವುದು ಎಂದರು.

ADVERTISEMENT

ದೇವಾಲಯದ ಮುಂದಿರುವ ಕೆರೆಯಲ್ಲಿ 12 ತಿಂಗಳೂ ನೀರು ಇರುವಂತೆ ಮಾಡಿ, ಭಕ್ತರ ವಿಹಾರಕ್ಕಾಗಿ ಎರಡು ಬೋಟ್‌ಗಳನ್ನು ಶ್ರೀಮಂತ ಪಾಟೀಲ ಫೌಂಡೇಶನ್‌ ವತಿಯಿಂದ ನೀಡಲಾಗಿದೆ ಎಂದರು.

ಮಂಗಸೂಳಿ ಗ್ರಾಮದಲ್ಲಿ ಕೂಡ ಒಂದು ಪದವಿ ಮಹಾವಿದ್ಯಾಲಯ, ಪಾಲಿಟೆಕ್ನಿಕ್ ಮಹಾವಿದ್ಯಾಲಯ ಜೊತೆಗೆ ಅಗ್ನಿಶಾಮಕ ಕೇಂದ್ರವನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಗ್ರಾಮದ ಮುಖಂಡರಾದ ಅಶೋಕ ಪೊಲೀಸ್‌ ಪಾಟೀಲ ಮಾತನಾಡಿದರು.

ವಿಕ್ರಂಸಿಂಹ ಪವಾರ ದೇಸಾಯಿ, ಉಜ್ವಲಸಿಂಹ ಪವಾರ ದೇಸಾಯಿ, ಮಯೂರಸಿಂಹ ಪವಾರ ದೇಸಾಯಿ, ಸಂದೀಪ ಪಾಟೀಲ, ಸಂಭಾಜಿ ಪಾಟೀಲ, ದಾದಾ ಪಾಟೀಲ, ಪ್ರವೀಣ ಹುಣಶಿಕಟ್ಟಿ, ರಾಜೇಶ ಹೆಬ್ಬಾಳ, ಸುಧಾಕರ ಭಗತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.