ADVERTISEMENT

ಯಾರು ಮೋಸ ಮಾಡಿದ್ದಾರೆ ಎನ್ನುವುದನ್ನು ಅವರ ಬಳಿಯೇ ಕೇಳಿರಿ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 14:03 IST
Last Updated 30 ಜೂನ್ 2021, 14:03 IST
ಸತೀಶ ಜಾರಕಿಹೊಳಿ ಹಾಗೂ ರಮೇಶ ಜಾರಕಿಹೊಳಿ
ಸತೀಶ ಜಾರಕಿಹೊಳಿ ಹಾಗೂ ರಮೇಶ ಜಾರಕಿಹೊಳಿ   

ಬೆಳಗಾವಿ: ‘ಕೆಲವು ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ’ ಎಂಬ ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗೆ ಸಹೋದರ ಮತ್ತು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಇಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದರು.

‘ಯಾರಿಗೆ ಯಾರು ಮೋಸ ಮಾಡಿದ್ದಾರೆ ಎನ್ನುವುದನ್ನು ಅವರ ಬಳಿಯೇ ಕೇಳಿರಿ’ ಎಂದರು.

ಸಚಿವ ಸ್ಥಾನಕ್ಕಾಗಿ ರಮೇಶ ದೆಹಲಿಗೆ ಭೇಟಿ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ, ‘ಅದು ಅವರ ಪಕ್ಷದ ಆಂತರಿಕ ವಿಚಾರ. ನಾನೇನೂ ಹೇಳಲಿಕ್ಕೆ ಬರುವುದಿಲ್ಲ. ಅದಕ್ಕೂ ನಮಗೂ ಸಂಬಂಧವಿಲ್ಲ’ ಎಂದು ಹೇಳಿದರು.

ADVERTISEMENT

‘ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಗೊಂದಲ ಎನ್ನುವುದು ಮುಗಿದು ಹೋಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು 2023ರ ಮೇ ಅಂತ್ಯಕ್ಕೆ ತಿಳಿಯಲಿದೆ. ಈಗ ಚರ್ಚೆ ಮಾಡುವುದು ಅನವಶ್ಯ. ಪಕ್ಷದಲ್ಲಿ ಗೊಂದಲ ಉಂಟಾದಾಗ ಪರಿಹಾರ ಮಾಡುವುದಕ್ಕೆ ವರಿಷ್ಠರು ಇದ್ದಾರೆ. ಏನೇ ಇದ್ದರೂ ಅವರು ಗಮನಿಸುತ್ತಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.