ADVERTISEMENT

‘ಬಿಜೆಪಿಯಿಂದ ಜಾತಿಗಳ ನಡುವೆ ಜಗಳ’

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 12:13 IST
Last Updated 26 ಡಿಸೆಂಬರ್ 2020, 12:13 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಗೋಕಾಕ: ‘ಬಿಜೆಪಿಯು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ. ಜಾತಿ–ಜಾತಿಗಳ ಮಧ್ಯೆ ಜಗಳ ಹಚ್ಚಿ ಶಾಂತಿ ಕದಡಲು ಮುಂದಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಇಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ದೇಶಕ್ಕೆ ಸ್ವಾತಂತ್ರ್ಯ ತಂದವರು ನಿಜವಾದ ದೇಶ ಭಕ್ತರು. ಬ್ರಿಟಿಷರನ್ನು ಕ್ಷಮೆ ಕೇಳಿದವರು ದೇಶಭಕ್ತರಾಗಲು ಹೇಗೆ ಸಾಧ್ಯ?’ ಎಂದು ಕೇಳಿದರು.

‘ದೇಶ ಭಕ್ತರು ಯಾರು ಮತ್ತು ನಕಲಿ ದೇಶ ಭಕ್ತರು ಯಾರು ಎಂದು ಜನರು ತೀರ್ಮಾನಿಸುವ ಕಾಲ ಬಂದೇ ಬರುತ್ತದೆ. ಸೇವೆ ಮಾಡುವುದು ಬಿಜೆಪಿಯವರಿಗೆ ಬೇಕಾಗಿಲ್ಲ. ಕೇವಲ ಧರ್ಮ, ಜಾತಿಗಳ ನಡುವೆ ಜಗಳ ಹಚ್ಚಿ ಮತ ಕಿತ್ತಿಕೊಳ್ಳುವುದೇ ಅವರ ಉದ್ದೇಶ’ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.