ಬೆಳಗಾವಿ: ‘ಸಮಾಜದಲ್ಲಿ ಎಲ್ಲ ವರ್ಗಗಳ ಜನರು ಸುಂದರವಾಗಿ ಕಾಣಲು ಕಾರಣವಾಗಿರುವ ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಣೆಯಾಗಬೇಕು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವರೂ ಬೆಳೆಯಬೇಕು’ ಎಂದು ಎಂಎನ್ಆರ್ಎಸ್ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಪ್ರೊ.ನಿರ್ಮಲಾ ಬಟ್ಟಲ್ ಹೇಳಿದರು.
ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶನಿವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಗಜಾನನ ಕಾಶೀದ್, ಉಪಾಧ್ಯಕ್ಷೆ ನೀಲಮ್ಮ ಟಿಪ್ಪುಪುಡೆ ಹಾಜರಿದ್ದರು.
ಇದಕ್ಕೂ ಮುನ್ನ, ಕೋಟೆ ಕೆರೆ ಬಳಿ ಇರುವ ಅಶೋಕ ವೃತ್ತದಿಂದ ರಂಗಮಂದಿರದವರೆಗೆ ನಡೆದ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಚಾಲನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.