ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಜ.17ರಿಂದ ಶಾಲೆ ಆರಂಭ: ಜಿಲ್ಲಾಧಿಕಾರಿ ಹಿರೇಮಠ ಆದೇಶ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 13:53 IST
Last Updated 12 ಜನವರಿ 2022, 13:53 IST
ಎಂ.ಜಿ. ಹಿರೇಮಠ
ಎಂ.ಜಿ. ಹಿರೇಮಠ   

ಬೆಳಗಾವಿ: ಜಿಲ್ಲೆಯಾದ್ಯಂತ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಜ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಆದೇಶ ಹೊರಡಿಸಿದ್ದಾರೆ.

‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾಧ್ಯಮದ ಶಾಲೆಗಳನ್ನು ಜ.19ವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ನೀಡಿದ ನಿರ್ದೇಶನದ ಅನ್ವಯ ಆದೇಶವನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಕೊರೊನಾ ವೈರಾಣು ಹರಡುವಿಕೆ ಪ್ರಮಾಣವು ಉಲ್ಬಣಗೊಳ್ಳುತ್ತಿರುವ ಕಿತ್ತೂರು ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ಸೈನಿಕ ವಸತಿ ಶಾಲೆಯನ್ನು ಮುಂದಿನ ಆದೇಶದವರೆಗೆ ಮುಂಜಾಗ್ರತಾ ಕ್ರಮವಾಗಿ ತೆರೆಯದಂತೆ ಆದೇಶ ಹೊರಡಿಸಲಾಗಿದೆ. ಉಳಿದಂತೆ ಎಲ್ಲ ಶಾಲಾ–ಕಾಲೇಜುಗಳನ್ನು ಮಾರ್ಗಸೂಚಿಗಳ ಅನ್ವಯ ಪುನರಾರಂಭಿಸಬೇಕು’ ಎಂದು ಆದೇಶಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.