ADVERTISEMENT

ಬೆಳಗಾವಿ | ಬಿಜೆಪಿ ಸರ್ಕಾರದಿಂದ ಅರಾಜಕತೆ ಸೃಷ್ಟಿ: ಎಸ್‌ಡಿಪಿಐ ಆರೋಪ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 13:14 IST
Last Updated 1 ಏಪ್ರಿಲ್ 2022, 13:14 IST
‘ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ’ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
‘ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ’ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ’ ಎಂದು ಆರೋಪಿಸಿ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕಾರ್ಯಕರ್ತರು ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಹಲಾಲ್ ಕಟ್ ಮಾಂಸ ಬಹಿಷ್ಕರಿಸುವಂತೆ ಕೆಲವರು ಪ್ರಚಾರ ನಡೆಸುತ್ತಿದ್ದರೂ ಸರ್ಕಾರ ಸುಮ್ಮನಿದೆ. ಮೈಸೂರಿ ಹುಲಿ ಟಿಪ್ಪು ಸುಲ್ತಾನ್ ಪಾಠವನ್ನು ಪಠ್ಯಕ್ರಮದಿಂದ ತೆಗೆಯುವಂಥಹ ನಿರ್ಧಾರವನ್ನು ತೆಗೆದುಕೊಂಡಿದೆ. ಇದು ಸರಿಯಲ್ಲ’ ಎಂದು ತಿಳಿಸಿದರು.

‘ಹಲಾಲ್ ಕಟ್ ಹಿಂದೆ ವೈಜ್ಞಾನಿಕ ಕಾರಣವಿದೆ. ಈ ಬಗ್ಗೆ ಸರ್ಕಾರ ಗಮನಿಸಬೇಕು. ಒಂದು ಸಮುದಾಯವನ್ನು ಗುರಿ ಮಾಡುವುದಕ್ಕೆ ಕಡಿವಾಣ ಹಾಕಬೇಕು’ ಎಂದರು.

ADVERTISEMENT

‘ಮಕ್ಕಳ ಮನಸ್ಸಿನಲ್ಲಿ ವಿಷ ಬಿತ್ತುವ ಶಿಕ್ಷಣ ನೀತಿಗಳನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.