ADVERTISEMENT

ಉಡಿಕೇರಿ: ಬಿತ್ತನೆ ಬೀಜ ವಿತರಣೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 16:03 IST
Last Updated 14 ಅಕ್ಟೋಬರ್ 2020, 16:03 IST
ಉಡಿಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಹಯೋಗದಲ್ಲಿ ಹಿಂಗಾರು ಹಂಗಾಮಿಗೆ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ರಮದಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡ್ಡಗೌಡರ ಭಾಗವಹಿಸಿದ್ದರು
ಉಡಿಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಹಯೋಗದಲ್ಲಿ ಹಿಂಗಾರು ಹಂಗಾಮಿಗೆ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ರಮದಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡ್ಡಗೌಡರ ಭಾಗವಹಿಸಿದ್ದರು   

ಉಡಿಕೇರಿ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಹಿಂಗಾರು ಹಂಗಾಮಿಗೆ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ಕೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಗೂಳಪ್ಪನವರ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ‘ಸರ್ಕಾರದಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ನೀಡಲಾಗುತ್ತಿದೆ. ಕೃಷಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮುಂಗಾರು ಹಂಗಾಮಿನ ಬೆಳೆಗಳು ಮಳೆಯಿಂದಾಗಿ ಹಾಳಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಾವೂ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದರು.

ಕೃಷಿ ಇಲಾಖೆ ಉಪನಿರ್ದೇಶಕ ಎಚ್.ಡಿ. ಕೋಳೆಕರ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ಸಹಾಯಕ ನಿರ್ದೇಶಕಿ ಪ್ರತಿಭಾ ಹೂಗಾರ, ಗ್ರಾಮ ಲೆಕ್ಕಾಧಿಕಾರಿ ದೀಪಕ ಕೌಜಲಗಿ, ಸಂಘದ ಉಪಾಧ್ಯಕ್ಷ ರುದ್ರಪ್ಪ ಗೌಡಪ್ಪ, ಲಾಲ್‌ಸಾಬ್‌ ತಡಕೋಡ, ಸದಸ್ಯರಾದ ಸೋಮಯ್ಯ ಸುತಗಟ್ಟಿ, ಈರಪ್ಪ ಕುರಿ, ಈರಪ್ಪ ಮಡಿವಾಳರ, ಬಸಪ್ಪ ಅಬ್ಬಾರ, ರಾಮಲಿಂಗಪ್ಪ ಕೋಟಗಿ, ಉಮೇಶ ಹಿತ್ತಲಮನಿ, ಮಹಾದೇವ ಹಲಕಿ, ವೀರಭದ್ರಪ್ಪ ಮಾದರ, ಶಿವಲಿಂಗವ್ವ ಪರವನ್ನವರ, ಭಾರತಿ ಗುರುಪುತ್ರನವರ, ಕಾರ್ಯದರ್ಶಿ ಆನಂದ ಹಲಕಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.