ADVERTISEMENT

ನೂತನ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 13:05 IST
Last Updated 7 ಅಕ್ಟೋಬರ್ 2020, 13:05 IST

ಬೆಳಗಾವಿ: ಜಿಲ್ಲಾ ಪತ್ರಿಕಾ ಛಾಯಾಗ್ರಾಹಕರು ಹಾಗೂ ವಿಡಿಯೊಗ್ರಾಫರ್‌ಗಳ ಸಂಘದ ನೂತನ ಪದಾಧಿಕಾರಿಗಳನ್ನು ಇಲ್ಲಿನ ವಾರ್ತಾ ಭವನದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ನೂತನ ಅದ್ಯಕ್ಷರಾಗಿ ಸದಾಶಿವ ಸಂಕಪ್ಪಗೋಳ, ಉಪಾಧ್ಯಕ್ಷರಾಗಿ ಏಕನಾಥ ಅಗಸಿಮನಿ, ಕಾರ್ಯದರ್ಶಿಯಾಗಿ ವಿಜಯ ಮೋಹಿತೆ, ಖಜಾಂಚಿಯಾಗಿ ಡಿ.ಬಿ. ಪಾಟೀಲ, ಸಲಹಾ ಸದಸ್ಯರಾಗಿ ಸುನೀಲ ಗಾವಡೆ, ವಸಂತ ಕೋಲಕಾರ, ಪಿ.ಕೆ. ಬಡಿಗೇರ, ಅಮೃತ ಬಿರ್ಜೆ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಮಾಜಿ ಶಾಸಕ ಬಿ.ಐ. ಪಾಟೀಲ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ADVERTISEMENT

ಪತ್ರಿಕಾ ಛಾಯಾಗ್ರಾಹಕರು ಹಾಗೂ ವಾಹಿನಿಗಳ ವಿಡಿಯೊಗ್ರಾಫರ್‌ಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.