ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟ ಏಳು ಜನರ ಮರಣೋತ್ತರ ಪರೀಕ್ಷೆ ಭಾನುವಾರ ಸಂಜೆಗೆ ಮುಕ್ತಾಯವಾಗಿದ್ದು. ಕುಟುಂಬಸ್ಥರು ತಮ್ಮ ಊರುಗಳಿಗೆ ಶವಗಳನ್ನು ತೆಗೆದುಕೊಂಡು ಹೋದರು.
ಇಲ್ಲಿನ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಶವಗಳನ್ನು ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.
ಕೊನೆಯ ಬಾರಿ ಮುಖ ನೋಡಲು ಶವಾಗಾರದ ಮುಂದೆ ಸೇರಿದ ಗ್ರಾಮಸ್ಥರು, ಕುಟುಂಬಸ್ಥರು, ಸ್ನೇಹಿತರು ಇನ್ನಿಲ್ಲದಂತೆ ಗೋಗರೆದರು.
ಆಸ್ಪತ್ರೆ ಮುಂಭಾಗದಲ್ಲಿ ರಸ್ತೆ ಮೇಲೆ ಬಿದ್ದು ಹೊರಳಾಡಿದ ಮಹಿಳೆಯರನ್ನು ಸಮಾಧಾನ ಮಾಡಲು ಪೊಲೀಸರು, ಆಸ್ಪತ್ರೆ ಸಿಬ್ಬಂದಿ ಪರದಾಡಿದರು.
ಬಳಿಕ ಆಸ್ಪತ್ರೆ ಸಿಬ್ಬಂದಿ ಶವಗಳನ್ನು ಆಂಬುಲೆನ್ಸ್ ನಲ್ಲಿ ಹಾಕಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಇದನ್ನೂ ಓದಿ:ಬೆಳಗಾವಿಯಲ್ಲಿ ಕ್ರೂಸರ್ ವಾಹನ ಪಲ್ಟಿ: ಏಳು ಕಾರ್ಮಿಕರು ಸ್ಥಳದಲ್ಲೇ ಸಾವು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.